HomeBidarಕೇವಲ ಮೂರೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಯುವಕನ ಬಲಿ ಪಡೆದ ಹೆಮ್ಮಾರಿ!

ಕೇವಲ ಮೂರೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಯುವಕನ ಬಲಿ ಪಡೆದ ಹೆಮ್ಮಾರಿ!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೀದರ

ಮದುವೆಗೆ ಸಿದ್ಧತೆ ನಡೆಸಿದ್ದ ಯುವಕನನ್ನು ಮಹಾಮಾರಿ ಬಲಿ ಪಡೆದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಈ ಘಟನೆ ಹುಲಸೂರು ಪಟ್ಟಣದಲ್ಲಿ ನಡೆದಿದೆ. ರಾಘವೇಂದ್ರ ವೈಜನಾಥ ಕಮಠಾಣೆ (27) ಸೋಂಕಿಗೆ ಬಲಿಯಾದ ದುರ್ದೈವಿ. ಮೃತ ಯುವಕನ ಮದುವೆ ಇದೇ ಮೇ. 31ರಂದು ನಿಶ್ಚಯವಾಗಿತ್ತು. ಹೀಗಾಗಿ ಮದುವೆ ಆಮಂತ್ರಣ ಪತ್ರಿಕೆಗಳು ಸಿದ್ಧಗೊಂಡಿದ್ದವು. ಹೀಗೆ ದಾಂಪತ್ಯ ಜೀವನದ ಕನಸು ಕಂಡು, ಸಿದ್ಧತೆಯಲ್ಲಿದ್ದ ಯುವಕನಿಗೆ ಕೊರೊನಾ ತಗುಲಿತ್ತು.

ಕೆಲವು ದಿನಗಳ ನಂತರ ಯುವಕನ ಆರೋಗ್ಯದಲ್ಲಿ ಹದಗೆಟ್ಟಿತ್ತು. ಪಕ್ಕದ ಮಹಾರಾಷ್ಟ್ರದ ಲಾತೂರ್ ನ ಖಾಸಗಿ ಆಸ್ಪತ್ರೆಯಲ್ಲಿ ಯುವಕನನ್ನು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಮೃತ ಯುವಕನ ತಂದೆ ನಿವೃತ್ತ ಶಿಕ್ಷಕರಾಗಿದ್ದರು. ಅವರು ತಮಗೆ ಇದ್ದ ಏಕೈಕ ಪುತ್ರನ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದು ಕನಸು ಕಂಡಿದ್ದರು. ಆದರೆ, ಲಾಕ್ ಡೌನ್ ಇರುವ ಹಿನ್ನೆಲೆಯಲ್ಲಿ ನಿಗದಿ ಪಡಿಸಿದ್ದ ಸಮಯದಲ್ಲಿಯೇ ಸರಳವಾಗಿ ಆಚರಿಸಲು ನಿರ್ಧರಿಸಿದ್ದರು. ಆದರೆ, ಮಹಾಮಾರಿ ಸಂಭ್ರಮದ ಮನೆಯಲ್ಲಿ ಸೂತಕ ವಾತಾವರಣ ನಿರ್ಮಿಸಿದೆ. ಸದ್ಯ ಏಕೈಕ ಪುತ್ರನ ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!