ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗದಗ ಜಿಲ್ಲಾ ಗೌರವಾಧ್ಯಕ್ಷ ಹಾಗೂ ಗದಗ ಜಿಲ್ಲಾ ಓಬಿಸಿ ಇಲಾಖೆಯ ಗದಗ ತಾಲೂಕು ಅಧಿಕಾರಿಗಳಾಗಿರುವ ಡಾ. ಬಸವರಾಜ ಬಳ್ಳಾರಿ ಅವರು 75 ಕೆಜಿ ವೇಟ್ ಲಿಫ್ಟಿಂಗ್ ಮಾಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ರವಿ ಗುಂಜೀಕರ ಅವರು 2024-25ನೇ ಸಾಲಿನ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ಪುನಶ್ಚೇತನ ಸಮಾರಂಭದಲ್ಲಿ ಅವರನ್ನು ಗೌರವಿಸಿ, ಪ್ರಮಾಣಪತ್ರ ನೀಡಿದರು.