ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಸಚಿವ ಆನಂದ್ ಸಿಂಗ್ ಭಾವನೆ ಹೇಳಿಕೊಂಡಿದ್ದಾರೆ. ಅದನ್ನು ಗೌರಿವಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಖಾತೆ ಹಂಚಿಕೆಗೆ ಆನಂದ್ ಸಿಂಗ್ ಅಸಮಾಧಾನ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಸಚಿವ ಆನಂದ್ ಸಿಂಗ್ ತಮ್ಮ ಭಾವನೆ ಹೇಳಿಕೊಂಡಿದ್ದಾರೆ. ಅವರ ಭಾವನೆ, ಮನವಿಯನ್ನು ಗೌರವಿಸುವುದಾಗಿ, ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸುವುದಾಗಿ ಹೇಳಿದ್ದೇನೆ ಎಂದು ಹೇಳಿದರು.
ಇಂದು ಸಂಜೆ ಎಂಟಿಬಿ ನಾಗರಾಜ್ ಕೂಡ ಭೇಟಿಯಾಗಲಿದ್ದಾರೆ. ಅವರೊಂದಿಗೂ ಮಾತುಕತೆ ನಡೆಸಿ ಸಮಸ್ಯೆ ಆಲಿಸುತ್ತೇನೆ ಎಂದು ಹೇಳಿದರು.



