HomeKarnataka News6 ಸಾವಿರದ ಗಡಿಗೆ ಬಂದು ನಿಂತ ಸೋಂಕು!

6 ಸಾವಿರದ ಗಡಿಗೆ ಬಂದು ನಿಂತ ಸೋಂಕು!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಇಂದು ರಾಜ್ಯದಲ್ಲಿ 5,983 ಜನರಿಗೆ ಸೋಂಕು ತಗುಲಿದ್ದು, 138 ಜನ ಬಲಿಯಾಗಿದ್ದಾರೆ.
ಸದ್ಯ ರಾಜ್ಯದಲ್ಲಿ 1,46,726 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ 33,434 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರದಲ್ಲಿ ಕೂಡ ಇಂದು ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ನಗರದಲ್ಲಿ 1,209 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರ, ದಕ್ಷಿಣ ಕನ್ನಡ, ದಾವಣಗೆರೆ, ಮೈಸೂರು ಜಿಲ್ಲೆಯಲ್ಲಿ ಮೃತರ ಸಂಖ್ಯೆ ಎರಡಂಕಿಯಲ್ಲಿದೆ. ಬಾಗಲಕೋಟೆ, ಬೀದರ್, ಚಿತ್ರದುರ್ಗ, ಗದಗ, ಕೊಡಗು ಮತ್ತು ಯಾದಗಿರಿಯಲ್ಲಿ ಯಾವುದೇ ಮರಣ ಸಂಭವಿಸಿಲ್ಲ.

ಇಂದು ಬಾಗಲಕೋಟೆ 22, ಬಳ್ಳಾರಿ 128, ಬೆಳಗಾವಿ 172, ಬೆಂಗಳೂರು ಗ್ರಾಮಾಂತರ 226, ಬೆಂಗಳೂರು ನಗರ 1,209, ಬೀದರ್ 8, ಚಾಮರಾಜನಗರ 98, ಚಿಕ್ಕಬಳ್ಳಾಪುರ 118, ಚಿಕ್ಕಮಗಳೂರು 198, ಚಿತ್ರದುರ್ಗ 110, ದಕ್ಷಿಣ ಕನ್ನಡ 679, ದಾವಣಗೆರೆ 153, ಧಾರವಾಡ 86, ಗದಗ 34,

ಹಾಸನ 424, ಹಾವೇರಿ 42, ಕಲಬುರಗಿ 25, ಕೊಡಗು 152, ಕೋಲಾರ 145, ಕೊಪ್ಪಳ 48, ಮಂಡ್ಯ 309, ಮೈಸೂರು 596, ರಾಯಚೂರು 16, ರಾಮನಗರ 37, ಶಿವಮೊಗ್ಗ 229, ತುಮಕೂರು 289, ಉಡುಪಿ 166, ಉತ್ತರ ಕನ್ನಡ 169, ವಿಜಯಪುರ83 ಮತ್ತು ಯಾದಗಿರಿಯಲ್ಲಿ 11 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!