HomePolitics Newsಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ : ಸಿದ್ದರಾಯ ಕಟ್ಟಿಮನಿ

ಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ : ಸಿದ್ದರಾಯ ಕಟ್ಟಿಮನಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : 18 ವರ್ಷ ಮೇಲ್ಪಟ್ಟ, ಮತದಾರರ ಪಟ್ಟಿಯಲ್ಲಿರುವ ಎಲ್ಲ ಅರ್ಹ ಮತದಾರರು ಮತದಾನದಿಂದ ಹೊರಗುಳಿಯಬಾರದೆನ್ನುವ ಉದ್ದೇಶದಿಂದ ಅವರಲ್ಲಿ ಮತದಾನದ ಮಹತ್ವವನ್ನು ತಿಳಿಸುವುದಕ್ಕಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ ಹೇಳಿದರು.

ಅವರು ಗುರುವಾರ ಪ.ಪಂ ವತಿಯಿಂದ ಎಲ್ಲ ಸಿಬ್ಬಂದಿಗಳೊಂದಿಗೆ ಕಚೇರಿಯ ಪ್ರಚಾರ ವಾಹನದ ಮೂಲಕ ಜನದಟ್ಟಣೆಯಿರುವ ಪ್ರದೇಶ ಹಾಗೂ ಪ್ರಮುಖ ಬೀದಿಗಳಲ್ಲಿ ಜಾಗೃತಿಯನ್ನು ಮೂಡಿಸಿ ಮಾತನಾಡಿದರು.

ಇಡೀ ಜಗತ್ತಿನಲ್ಲಿಯೇ ಬೃಹತ್ ಲಿಖಿತ ಸಂವಿಧಾನ ನಮ್ಮದಾಗಿದ್ದು, ಈ ಸಂವಿಧಾನವು ನಮಗೆ ನೀಡಿದ ಮತದಾನದ ಅಧಿಕಾರವನ್ನು ಚಲಾಯಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಒಂದೊಂದು ಮತವು ಕೂಡಾ ಬಲಿಷ್ಠ ರಾಷ್ಟç ನಿರ್ಮಾಣಕ್ಕೆ ಸಾಕ್ಷಿಯಾಗಲಿದೆ. ಆದ್ದರಿಂದ ಯಾವುದೇ ಆಮಿಷಗಳಿಗೆ ಒಳಪಡದೇ ನಿರ್ಭಯವಾಗಿ ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲ ಅರ್ಹರೂ ಮತದಾನ ಮಾಡಬೇಕು. ಈ ಬಗ್ಗೆ ಜಿಲ್ಲಾ ಹಾಗೂ ತಾಲೂಕಾಡಳಿತದ ಹಂತದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಮುಖ್ಯೋಪಾಧ್ಯಾಯ ಜಿ.ಡಿ. ಈರಕ್ಕನವರ ಮತ್ತು ಪ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img