HomeGadag Newsಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ : ಸಂಗಮೇಶ ಹಾದಿಮನಿ

ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ : ಸಂಗಮೇಶ ಹಾದಿಮನಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಎನ್ನುವ ಯುವತಿಯನ್ನು ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ಗದಗ ಜಿಲ್ಲಾ ಅಂಬಿಗರ ಸಮಾಜ ಬಾಂಧವರು ಹಾಗೂ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮೇಶ ಹಾದಿಮನಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನೇಹಾ ಹಿರೇಮಠ ಹತ್ಯೆಯ ನೆನಪು ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಇನ್ನೋರ್ವ ಯುವತಿಯ ಕೊಲೆ ನಡೆದಿದೆ. ಈ ಕೃತ್ಯದಿಂದ ಇಡೀ ಮಾನವ ಸಮಾಜ ತಲೆ ಬಾಗಿಸುವಂತೆ ಆಗಿದೆ. ಅವಳ ಹತ್ಯೆಯಿಂದ ಕುಟುಂಬ ಬೀದಿಗೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕೂಡಲೇ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರಕಾರ ಎಚ್ಚೆತ್ತು ಆರೋಪಿಯನ್ನು ಬಂಧಿಸಿ, ಗಲ್ಲುಶಿಕ್ಷೆಗೆ ಒಳಪಡಿಸಬೇಕು. ಮೃತ ಯುವತಿಯ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img