Homecultureಹಿಂದೂ ಮಹಾಗಣಪತಿ ವಿಸರ್ಜನೆ ನಾಳೆ

ಹಿಂದೂ ಮಹಾಗಣಪತಿ ವಿಸರ್ಜನೆ ನಾಳೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಪೇಟೆ ಹನುಮಂತದೇವರ ದೇವಸ್ಥಾನದ ಹತ್ತಿರ ಹಿಂದೂ ಮಹಾಗಣಪತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಬೃಹತ್ ಹಾಗೂ ಸುಂದರವಾದ ಗಣೇಶನ ಮೂರ್ತಿಯ ವಿಸರ್ಜನೆ ಕಾರ್ಯಕ್ರಮವು ಸೆ.25ರಂದು ಮದ್ಯಾಹ್ನ 1 ಗಂಟೆಗೆ ಪ್ರಾರಂಭವಾಗಲಿದೆ.

21 ಅಡಿಗೂ ಅಧಿಕ ಎತ್ತರದ ಬೃಹತ್ ಮೂರ್ತಿಯನ್ನು ಹಿಂದೂ ಮಹಾಸಭಾ ಯುವಕರ ತಂಡ ಪ್ರತಿಷ್ಠಾಪಿಸಿದ್ದು, ಸಮಿತಿ ವತಿಯಿಂದ ಸಂಪ್ರದಾಯಬದ್ಧವಾದ ಪ್ರಜೆ-ಪುನಸ್ಕಾರಗಳನ್ನು ನೆರವೇರಿಸಲಾಗುತ್ತಿದೆ.

ಅನೇಕ ಸಾಂಸ್ಕೃತಿಕ, ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗಮನ ಸೆಳೆಯುತ್ತಿದೆ. ಬುಧವಾರ ಮದ್ಯಾಹ್ನ 1 ಗಂಟೆಗೆ ಅದ್ದೂರಿ ಮೆರವಣಿಗೆಯು ಪಟ್ಟಣದ ಹಾಗೂ ಸುತ್ತಮುತ್ತಲಿನ ಸಾವಿರಾರು ಜನರ ಸಮ್ಮುಖದಲ್ಲಿ ಪ್ರಾರಂಭವಾಗಲಿದ್ದು, ಮೆರವಣಿಗೆಗೆ ಹಲವು ಮುಖಂಡರು ಚಾಲನೆ ನೀಡಲಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳಬೇಕು ಎಂದು ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಫಕ್ಕೀರೇಶ ಅಣ್ಣಿಗೇರಿ ಮತ್ತು ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img