ರಾಯಚೂರು:- ಕಳೆದ ಎರಡು ವರ್ಷಗಳ ಹಿಂದೆ ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಲಿಂಗಸುಗೂರು ಪೀಠ ಆದೇಶ ಹೊರಡಿಸಿದೆ.
ಮೃತ ಮಹಿಳೆ ವಿಜಯಲಕ್ಷ್ಮಿ ಜೊತೆ ಯರಡೋಣ ಗ್ರಾಮದ ಆರೋಪಿ ದೇವರಾಜ ಅಕ್ರಮ ಸಂಬಂಧ ಹೊಂದಿದ್ದ. ಇದೀಗ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯ ಆರೋಪಿ ಮೇಲೆ ಕಠಿಣ ಕ್ರಮ ಕೈಗೊಂಡಿದೆ.
ಮೃತ ಮಹಿಳೆ ಪತಿ ಮರಣ ನಂತರ ತವರು ಮನೆ ಯರಡೋಣದಲ್ಲಿ ವಾಸವಾಗಿದ್ದರು. ಈ ವೇಳೆ ಸಲುಗೆ ಬೆಳೆಸಿಕೊಂಡು ದೇವರಾಜ ಅಕ್ರಮ ಸಂಬಂಧ ಹೊಂದಿದ್ದ. 2024ರ ಮಾ.10ರಂದು ಅಮವಾಸ್ಯೆ ಹಿನ್ನೆಲೆ ಇಬ್ಬರು ಜೊತೆಯಲ್ಲಿ ಛತ್ತರ ಹನುಮಪ್ಪ ದೇವಸ್ಥಾನಕ್ಕೆ ಹೋಗಿದ್ದರು. ಗ್ರಾಮಕ್ಕೆ ಮರಳುವಾಗ ಲಿಂಗಸುಗೂರಿನಲ್ಲಿ ಹಳ್ಳದ ದಂಡೆಯ ಪೊದೆಯಲ್ಲಿ ತನ್ನ ಜೊತೆ ಮಲಗಲು ಸಹಕರಿಸದಿದ್ದಕ್ಕೆ ಆರೋಪಿ ಮಹಿಳೆಯನ್ನ ಕೊಲೆ ಮಾಡಿದ್ದ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಎರಡು ವರ್ಷದ ಬಳಿಕ ಆರೋಪಿ ವಿರುದ್ದ ನ್ಯಾಯಾಲಯ ಕಠಿಣ ಕ್ರಮ ಕೈಗೊಂಡಿದೆ.



