HomeKarnataka Newsಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ LPG ಸಿಲಿಂಡರ್ ಕೊರತೆ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ LPG ಸಿಲಿಂಡರ್ ಕೊರತೆ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

For Dai;y Updates Join Our whatsapp Group

Spread the love

ಬೆಂಗಳೂರು: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಇತ್ತೀಚೆಗೆ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಎಲ್‌ಪಿಜಿ ಉತ್ಪಾದನೆಯಲ್ಲಿ ಗೃಹ ಬಳಕೆಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಗೆ ಭಾರಿ ವ್ಯತ್ಯಯ ಉಂಟಾಗಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಗರದ ಅನೇಕ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಿಗೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳು ಸಿಗದ ಪರಿಸ್ಥಿತಿ ಉಂಟಾಗಿದೆ. ಇದೇ ಸ್ಥಿತಿ ಮುಂದುವರಿದರೆ ಹಲವಾರು ಹೋಟೆಲ್‌ಗಳು ತಾತ್ಕಾಲಿಕವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸುವ ಸಾಧ್ಯತೆ ಇದೆ ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಸಾವಿರಾರು ಸಣ್ಣ ಹೋಟೆಲ್‌ಗಳು, ಮೆಸ್ಸುಗಳು ಹಾಗೂ ಕೇಟರಿಂಗ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ ಲಕ್ಷಾಂತರ ಜನರು ಇವುಗಳ ಮೇಲೆ ಅವಲಂಬಿತರಿದ್ದಾರೆ. ಹೊರನಗರಗಳಿಂದ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕಾಗಿ ಬಂದಿರುವ ಅನೇಕರು ದಿನನಿತ್ಯದ ಆಹಾರಕ್ಕಾಗಿ ಇಂತಹ ಹೋಟೆಲ್ ಮತ್ತು ಮೆಸ್ಸುಗಳನ್ನೇ ನಂಬಿಕೊಂಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಸಾಮಾನ್ಯವಾಗಿ ರಾಜ್ಯದ ವಾಣಿಜ್ಯ ಎಲ್‌ಪಿಜಿ ಬೇಡಿಕೆಯನ್ನು ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿಎಲ್ (IOCL), ಎಚ್‌ಪಿಸಿಎಲ್ (HPCL) ಮತ್ತು ಬಿಪಿಸಿಎಲ್ (BPCL) ಮೂಲಕ ಪೂರೈಸಲಾಗುತ್ತದೆ. ಇದರಲ್ಲಿ ಐಒಸಿಎಲ್ ದಿನಕ್ಕೆ ಸುಮಾರು 500–550 ಮೆಟ್ರಿಕ್ ಟನ್, ಎಚ್‌ಪಿಸಿಎಲ್ 300 ಮೆಟ್ರಿಕ್ ಟನ್ ಹಾಗೂ ಬಿಪಿಸಿಎಲ್ 230 ಮೆಟ್ರಿಕ್ ಟನ್ ವರೆಗೆ ಪೂರೈಕೆ ಮಾಡುತ್ತಿತ್ತು. ಆದರೆ ಪೂರೈಕೆಯಲ್ಲಿ ಉಂಟಾದ ಅಚಾನಕ್ ವ್ಯತ್ಯಯದಿಂದ ಬಳಕೆದಾರರಿಗೆ ಸಮಸ್ಯೆ ಎದುರಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಮತ್ತು ಕೇಟರಿಂಗ್ ಉದ್ಯಮಕ್ಕೆ ಅಗತ್ಯವಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯನ್ನು ಶೀಘ್ರದಲ್ಲೇ ಪುನಃಸ್ಥಾಪಿಸಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!