HomeKarnataka Newsರಾಜ್ಯಾದ್ಯಂತ ಬಿಸಿಲಿನ ಕಾಟ: ಕಲಬುರಗಿಯಲ್ಲಿ 45°C, ಬೆಂಗಳೂರಿನಲ್ಲಿ ಉಷ್ಣತೆ ಏರಿಕೆ!

ರಾಜ್ಯಾದ್ಯಂತ ಬಿಸಿಲಿನ ಕಾಟ: ಕಲಬುರಗಿಯಲ್ಲಿ 45°C, ಬೆಂಗಳೂರಿನಲ್ಲಿ ಉಷ್ಣತೆ ಏರಿಕೆ!

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನೇದಿನೇ ಏರಿಕೆಯಾಗುತ್ತಿದ್ದು, ಜನರು ತೀವ್ರ ಬೇಗೆಯಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 44°–45°C ತಾಪಮಾನ ದಾಖಲಾಗಿದ್ದು, ಆತಂಕ ಹೆಚ್ಚಿಸಿದೆ.

ಇನ್ನೊಂದೆಡೆ ಬೆಂಗಳೂರಿನಲ್ಲಿ ಬುಧವಾರ 35.8°C ತಾಪಮಾನ ದಾಖಲಾಗಿದ್ದು, ಕಳೆದ ಕೆಲ ದಿನಗಳಿಂದ ಏಪ್ರಿಲ್ ತಿಂಗಳ ಹಿಂದಿನ ದಾಖಲೆಗಳನ್ನು ಮೀರುವ ಮಟ್ಟದಲ್ಲಿ ಉಷ್ಣತೆ ಏರಿಕೆಯಾಗುತ್ತಿದೆ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36°C ರಿಂದ 37°C ನಡುವೆ ಇರಲಿದೆ. ಮಂಗಳವಾರ 36.6°C ದಾಖಲಾಗಿದ್ದು, ಈ ವರ್ಷದಲ್ಲೇ ಅತ್ಯಂತ ಬಿಸಿಯಾದ ದಿನವಾಗಿತ್ತು. ಮುಂದಿನ ದಿನಗಳಲ್ಲಿ 38°C ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದ್ದರೂ, ಅದು ಸೀಮಿತ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಲಿದೆ.

ಇದೇ ವೇಳೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಆರೆಂಜ್ ಹಾಗೂ ಯೆಲ್ಲೋ ಹೀಟ್‌ವೇವ್ ಅಲರ್ಟ್ ನೀಡಲಾಗಿದೆ. ಕಲಬುರಗಿಯ ಅವ್ರಾದ್ ಬಿ ಪ್ರದೇಶದಲ್ಲಿ 45°C, ಚಿಂಚೋಳಿ ಮತ್ತು ಅಫ್ಜಲ್ಪುರದಲ್ಲಿ 44°C ಕ್ಕೂ ಅಧಿಕ ತಾಪಮಾನ ದಾಖಲಾಗಿದೆ.

ಸಾಮಾನ್ಯಕ್ಕಿಂತ 3°C ರಿಂದ 4°C ಹೆಚ್ಚು ತಾಪಮಾನ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಕಲಬುರಗಿ ಜಿಲ್ಲಾಧಿಕಾರಿ ನಾಗರಿಕರಿಗೆ ಬೆಳಿಗ್ಗೆ 11:30ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಲು ಸೂಚಿಸಿದ್ದಾರೆ.

ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಬಿಸಿ ಮತ್ತು ತೇವಾಂಶಯುಕ್ತ ಹವಾಮಾನದ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img