HomeKarnataka Newsಯೋಗೀಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಯೋಗೀಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

For Dai;y Updates Join Our whatsapp Group

Spread the love

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆ ಪ್ರಕಟವಾಗಿದ್ದು, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದ 15ನೇ ಆರೋಪಿ ವಿನಯ್ ಕುಲಕರ್ಣಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 19ನೇ ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಎ1 ಬಸವರಾಜ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿ ನ್ಯಾಯಾಲಯ ಪರಿಗಣಿಸಿದೆ. ಇದಲ್ಲದೆ, ಮೃತ ಯೋಗೇಶ್ ಗೌಡ ಅವರ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ.

ಈ ತೀರ್ಪು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಪ್ರಜಾಪ್ರತಿನಿಧಿ ಕಾಯ್ದೆಯಡಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೂ ಧಕ್ಕೆಯಾಗುವ ಸಾಧ್ಯತೆ ಇದೆ.

ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದು, ಅವರಲ್ಲಿ ಇಬ್ಬರು ಮಾಫಿ ಸಾಕ್ಷಿಗಳಾಗಿದ್ದಾರೆ. ಉಳಿದ 19 ಮಂದಿಯನ್ನು ಕೋರ್ಟ್ ದೋಷಿಗಳೆಂದು ತೀರ್ಮಾನಿಸಿದೆ. ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕ ಪ್ರತಿಕೂಲ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ, ಅವರನ್ನು ಮರುಆರೋಪಿಯಾಗಿ ಪರಿಗಣಿಸುವಂತೆ ಸಿಬಿಐ ಮನವಿ ಸಲ್ಲಿಸಿದೆ.

ಇನ್ನು ಎ20 ವಾಸುದೇವ ನಿಲೇಕಣಿ ಮತ್ತು ಎ21 ಸೋಮಶೇಖರ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಇತರೆ ಆರೋಪಿಗಳಾದ ವಿಕ್ರಮ್, ಕೀರ್ತಿ ಕುಮಾರ್, ಸಂದೀಪ್, ವಿನಾಯಕ, ಮಹಾಬಲೇಶ್ವರ್, ಸಂತೋಷ್, ದಿನೇಶ್, ಅಶ್ವತ್, ಸುನಿಲ್, ನಜೀರ್ ಅಹಮದ್, ಷಾನವಾಜ್, ನೂತನ್, ಹರ್ಷಿತ್, ಚಂದ್ರು ಮಾಮ, ವಿಕಾಸ್ ಕಲಬುರ್ಗಿ ಸೇರಿದಂತೆ ಹಲವರನ್ನು ದೋಷಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!