HomeEntertainmentಪವನ್ ಕಲ್ಯಾಣ್ ಸಿನಿಮಾಗೆ ಕಂಬ್ಯಾಕ್ ಮಾಡಲು ತಡವಾಗುತ್ತಿರುವುದಕ್ಕೆ ಅಸಲಿ ಕಾರಣ ಬಯಲು

ಪವನ್ ಕಲ್ಯಾಣ್ ಸಿನಿಮಾಗೆ ಕಂಬ್ಯಾಕ್ ಮಾಡಲು ತಡವಾಗುತ್ತಿರುವುದಕ್ಕೆ ಅಸಲಿ ಕಾರಣ ಬಯಲು

For Dai;y Updates Join Our whatsapp Group

Spread the love

ಉಪಮುಖ್ಯಮಂತ್ರಿ ಆದ ಬಳಿಕ ಸಿನಿಮಾಗಳಿಂದ ದೂರ ಉಳಿದಿರುವ ಪವನ್ ಕಲ್ಯಾಣ್ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿದ್ದವು. ಇದೀಗ ಅವರ ಸಿನಿ ವಿರಾಮದ ಹಿಂದಿನ ನಿಜವಾದ ಕಾರಣ ಆರೋಗ್ಯ ಸಮಸ್ಯೆ ಎಂಬ ಮಾಹಿತಿ ಹೊರಬಿದ್ದಿದೆ.

ಇತ್ತೀಚೆಗೆ ಪವನ್ ಕಲ್ಯಾಣ್ ಮೂಗಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಪವನ್ ಚೇತರಿಸಿಕೊಳ್ಳುತ್ತಿರುವುದು ಗಮನ ಸೆಳೆದಿತ್ತು.

ವರದಿಗಳ ಪ್ರಕಾರ, ಸಿನಿಮಾ ಶೂಟಿಂಗ್ ವೇಳೆ ಆಗಿದ್ದ ಹಲವು ಗಾಯಗಳನ್ನು ಪವನ್ ಕಲ್ಯಾಣ್ ವರ್ಷಗಳ ಕಾಲ ನಿರ್ಲಕ್ಷಿಸಿದ್ದರು. ಈಗ ಅವೇ ಗಾಯಗಳು ಆರೋಗ್ಯದ ಮೇಲೆ ಪರಿಣಾಮ ಬೀರತೊಡಗಿವೆ ಎನ್ನಲಾಗಿದೆ.

ಡಿಸಿಎಂ ಆಗಿ ಭಾರೀ ಜವಾಬ್ದಾರಿ ಹೊತ್ತಿರುವ ಪವನ್ ಅವರಿಗೆ ಸದ್ಯ ವಿಶ್ರಾಂತಿಗೆ ಸಮಯವೇ ಸಿಗುತ್ತಿಲ್ಲ. ಇದೇ ಕಾರಣದಿಂದ ಮತ್ತೆ ಸಿನಿಮಾ ಶೂಟಿಂಗ್‌ಗೆ ಮರಳುವುದು ಆರೋಗ್ಯದ ದೃಷ್ಟಿಯಿಂದ ಸೂಕ್ತವಲ್ಲ ಎಂದು ಆಪ್ತರು ಸಲಹೆ ನೀಡಿದ್ದಾರೆ.

ಸುರೇಂದರ್ ರೆಡ್ಡಿ ನಿರ್ದೇಶನದ ಹೊಸ ಸಿನಿಮಾದ ಚರ್ಚೆ ನಡೆದಿದ್ದರೂ, ಪವನ್ ಅವರ ಮೊದಲ ಆದ್ಯತೆ ಈಗ ಆರೋಗ್ಯ ಮತ್ತು ಆಡಳಿತ ಕಾರ್ಯಗಳಾಗಿವೆ. ಸಂಪೂರ್ಣ ಚೇತರಿಸಿಕೊಂಡ ಬಳಿಕವೇ ಅವರು ಕ್ಯಾಮೆರಾ ಎದುರು ಬರಲಿದ್ದಾರೆ ಎನ್ನಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!