ಬೆಂಗಳೂರು:- ಬೈಕ್ ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಾಣಾವರದ ಲಕ್ಷ್ಮಿಪುರದ ಬಳಿ ಜರುಗಿದೆ.
ಮನೋಜ್ (22) ಮೃತ ಯುವಕ. ಸ್ಕೂಟರ್ ನಲ್ಲಿ ಮನೋಜ್ ಹಾಗೂ ಆತನ ಸ್ನೇಹಿತ ತೆರಳುತ್ತಿದ್ದರು. ಆಗ ಬೈಕ್ ಗೆ ಸ್ಕೂಟರ್ ಡಿಕ್ಕಿಯಾಗಿದೆ. ನೆನ್ನೆ ರಾತ್ರಿ ಸುಮಾರು 11:30 ಕ್ಕೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಸಧ್ಯ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಾಣಾವರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



