HomeBelgaumಉದ್ಯೋಗಕ್ಕಾಗಿ ನೇಪಾಳಕ್ಕೆ ಹೋಗಿದ್ದ ಬೆಳಗಾವಿ ಯುವಕನ ಕೊಲೆ: ಮೃತದೇಹ ಭಾರತಕ್ಕೆ ತರಲು ಕುಟುಂಬದ ಮನವಿ

ಉದ್ಯೋಗಕ್ಕಾಗಿ ನೇಪಾಳಕ್ಕೆ ಹೋಗಿದ್ದ ಬೆಳಗಾವಿ ಯುವಕನ ಕೊಲೆ: ಮೃತದೇಹ ಭಾರತಕ್ಕೆ ತರಲು ಕುಟುಂಬದ ಮನವಿ

For Dai;y Updates Join Our whatsapp Group

ಬೆಳಗಾವಿ: ಉದ್ಯೋಗ ಅರಸಿ ನೇಪಾಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಯುವಕನನ್ನು ಆತನ ರೂಮ್‌ಮೇಟ್‌ನೇ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯಿಂದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದು, ಮೃತದೇಹವನ್ನು ಭಾರತಕ್ಕೆ ತರಲು ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೃತ ಯುವಕನನ್ನು ಖಾನಾಪುರ ಪಟ್ಟಣದ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಎಂದು ಗುರುತಿಸಲಾಗಿದೆ.

ನೇಪಾಳದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಸಾಹಿಲ್, ತನ್ನೊಂದಿಗೆ ವಾಸವಾಗಿದ್ದ ರೂಮ್‌ಮೇಟ್‌ನಿಂದಲೇ ಕೊಲೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಮೃತದೇಹವನ್ನು ಭಾರತಕ್ಕೆ ತರುವ ಸಂಬಂಧ ಕುಟುಂಬಸ್ಥರು ಪೊಲೀಸರ ಮೂಲಕ ಅಗತ್ಯ ಪ್ರಕ್ರಿಯೆ ಆರಂಭಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರಕ್ಕೆ ಮನವಿ ಮಾಡಿದ್ದಾರೆ.

ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದ ಯುವಕನ ದುರಂತ ಸಾವಿನ ಸುದ್ದಿ ಖಾನಾಪುರದಲ್ಲಿ ಶೋಕದ ವಾತಾವರಣ ನಿರ್ಮಿಸಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯರು ಕಂಬನಿ ಮಿಡಿದಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img