ಗದಗ: ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್, ಜಲಫಿರಂಗಿ ಹಾಗೂ ಆಶ್ರುವಾಯು ಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಆಮ್ ಆದ್ಮಿ ಪಕ್ಷದ ಗದಗ ಜಿಲ್ಲಾಧ್ಯಕ್ಷ ಡಾ. ದಾದಾಪೀರ ಕಲೆಗಾರ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೀಟ್ ಪರೀಕ್ಷೆಯ ಅಕ್ರಮಗಳಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದು, ನ್ಯಾಯಯುತ ತನಿಖೆ ಮತ್ತು ಕ್ರಮಕ್ಕಾಗಿ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಬಲಪ್ರಯೋಗ ನಡೆಸಿರುವುದು ಖಂಡನೀಯ ಎಂದು ಹೇಳಿದರು.
ಚುನಾವಣೆಗೂ ಮುನ್ನ ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವುದು ಹಾಗೂ ಕಪ್ಪುಹಣವನ್ನು ದೇಶಕ್ಕೆ ತರುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಯುವ ಸಮುದಾಯದ ಸಮಸ್ಯೆಗಳನ್ನು ಆಲಿಸುವ ಬದಲು ದಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ಟೀಕಿಸಿದರು.
“ಪ್ರಧಾನಿ ನರೇಂದ್ರ ಮೋದಿಯವರು ‘ಮನ್ ಕಿ ಬಾತ್’ ಮಾತ್ರವಲ್ಲ, ದೇಶದ ಯುವಕರ ‘ದಿಲ್ ಕಿ ಬಾತ್’ ಕೂಡ ಕೇಳಬೇಕು” ಎಂದು ಅವರು ಆಗ್ರಹಿಸಿದರು.
ನೀಟ್ ಪರೀಕ್ಷೆ ವಿವಾದ ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಮೂಡಿರುವ ಆತಂಕ ನಿವಾರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಪ್ರತಿಭಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸಮರ್ಪಕ ಚಿಕಿತ್ಸೆ ಹಾಗೂ ಸೂಕ್ತ ಪರಿಹಾರ ನೀಡಬೇಕು ಎಂದು ಡಾ. ದಾದಾಪೀರ ಕಲೆಗಾರ ಒತ್ತಾಯಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ‘ಮನ್ ಕಿ ಬಾತ್’ ಮಾತ್ರವಲ್ಲ, ದೇಶದ ಯುವಕರ ‘ದಿಲ್ ಕಿ ಬಾತ್’ ಕೂಡ ಕೇಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ನೀಟ್ ವಿವಾದದಿಂದ ವಿದ್ಯಾರ್ಥಿಗಳಲ್ಲಿ ಮೂಡಿರುವ ಆತಂಕ ನಿವಾರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಪ್ರತಿಭಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.



