HomeKarnataka Newsಕರ್ನಾಟಕಕ್ಕೆ ಮತ್ತೊಂದು ಶಾಕ್:‌ ತಮಿಳುನಾಡಿಗೆ ಮತ್ತೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು CWRC ಆದೇಶ!

ಕರ್ನಾಟಕಕ್ಕೆ ಮತ್ತೊಂದು ಶಾಕ್:‌ ತಮಿಳುನಾಡಿಗೆ ಮತ್ತೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು CWRC ಆದೇಶ!

For Dai;y Updates Join Our whatsapp Group

ನವದೆಹಲಿ / ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಾಗಿರುವ ಹಿನ್ನೆಲೆ ಕೆಆರ್‌ಎಸ್ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರು ಹಾಗೂ ನೀರಾವರಿ ಕುರಿತು ಆತಂಕ ಹೆಚ್ಚಿರುವ ನಡುವೆಯೇ,

ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿದೆ.

ಮಂಗಳವಾರ ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳ ನೀರಿನ ಲಭ್ಯತೆ, ಮಳೆಯ ಪ್ರಮಾಣ ಹಾಗೂ ಎರಡೂ ರಾಜ್ಯಗಳ ಕುಡಿಯುವ ನೀರಿನ ಅಗತ್ಯತೆ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.

ಸಭೆಯ ಬಳಿಕ ತಮಿಳುನಾಡಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸಮಿತಿ ನಿರ್ದೇಶನ ನೀಡಿದೆ.

ಸಭೆಯಲ್ಲಿ ಕರ್ನಾಟಕದ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಹಾಗೂ ತಜ್ಞರ ತಂಡ ರಾಜ್ಯದಲ್ಲಿ ಉಂಟಾಗಿರುವ ತೀವ್ರ ಮಳೆ ಕೊರತೆ, ಜಲಾಶಯಗಳಲ್ಲಿನ ನೀರಿನ ಅಭಾವ ಮತ್ತು ಕುಡಿಯುವ ನೀರಿನ ಸಮಸ್ಯೆ ಕುರಿತು ಸಮಿತಿಯ ಗಮನ ಸೆಳೆದರು.

ಹಾರಂಗಿ ಜಲಾಶಯವನ್ನು ಹೊರತುಪಡಿಸಿ ಕೆಆರ್‌ಎಸ್, ಕಬಿನಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರವಾಗಿ ಕುಸಿದಿದೆ. ಬೆಂಗಳೂರು ಸೇರಿದಂತೆ ಹಲವು ನಗರಗಳ ಕುಡಿಯುವ ನೀರಿನ ಅಗತ್ಯತೆ ಹಾಗೂ ರೈತರ ಬೆಳೆಗಳಿಗೆ ನೀರಿನ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡದಂತೆ ಕರ್ನಾಟಕದ ಅಧಿಕಾರಿಗಳು ಬಲವಾದ ವಾದ ಮಂಡಿಸಿದ್ದರು.

ಆದಾಗ್ಯೂ, ಸಮಿತಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿರುವುದು ಕರ್ನಾಟಕದ ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಆದೇಶದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಅಭಾವ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಯ ಈ ಶಿಫಾರಸಿನ ವಿರುದ್ಧ ಕರ್ನಾಟಕ ಸರ್ಕಾರವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img