HomeEntertainment'ಅಶ್ಲೀಲ ಜೋಕ್‌ಗಳಿಗೆ ನಾಗರಿಕ ಸಮಾಜದಲ್ಲಿ ಜಾಗವಿಲ್ಲ': ಉದಯನಿಧಿ ಪ್ರಕರಣದ ಬಗ್ಗೆ ಕಂಗನಾ ಪ್ರತಿಕ್ರಿಯೆ

‘ಅಶ್ಲೀಲ ಜೋಕ್‌ಗಳಿಗೆ ನಾಗರಿಕ ಸಮಾಜದಲ್ಲಿ ಜಾಗವಿಲ್ಲ’: ಉದಯನಿಧಿ ಪ್ರಕರಣದ ಬಗ್ಗೆ ಕಂಗನಾ ಪ್ರತಿಕ್ರಿಯೆ

For Dai;y Updates Join Our whatsapp Group

ಚೆನ್ನೈ: ನಟಿ ತ್ರಿಷಾ ಕೃಷ್ಣನ್ ಕುರಿತು ನೀಡಿದರೆಂದು ಆರೋಪಿಸಲಾದ ದ್ವಂದ್ವಾರ್ಥದ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಈ ವಿವಾದಕ್ಕೆ ಇದೀಗ ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಎಂಟ್ರಿ ನೀಡಿದ್ದಾರೆ.

ಉದಯನಿಧಿ ಸ್ಟಾಲಿನ್ ವಿರುದ್ಧದ ಕ್ರಮವನ್ನು ಬೆಂಬಲಿಸಿರುವ ಕಂಗನಾ, “ಸಾರ್ವಜನಿಕ ಜೀವನದಲ್ಲಿರುವವರು ಮಹಿಳೆಯರ ಬಗ್ಗೆ ಅಸಭ್ಯ ಭಾಷೆ ಬಳಸುವುದು ಅಥವಾ ದ್ವಂದ್ವಾರ್ಥದ ಮಾತುಗಳನ್ನು ಆಡುವುದು ಒಪ್ಪಲಾಗದು. ಇಂತಹ ಪ್ರಕರಣಗಳಲ್ಲಿ ಕಾನೂನು ಕ್ರಮವೇ ಸರಿಯಾದ ಸಂದೇಶ ನೀಡುತ್ತದೆ” ಎಂದು ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಕಾವೇರಿ ನೀರಿನ ವಿಚಾರವಾಗಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರೇಕ್ಷಕರ ಪ್ರತಿಕ್ರಿಯೆಗೆ ಉತ್ತರಿಸುವ ವೇಳೆ ಉದಯನಿಧಿ ನೀಡಿದ ಹೇಳಿಕೆ ನಟಿ ತ್ರಿಷಾ ಅವರನ್ನು ಉದ್ದೇಶಿಸಿ ಮಾಡಿರುವ ಅಸಭ್ಯ ಕಾಮೆಂಟ್ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಹಿಳಾ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಕ್ರಮಕ್ಕೆ ಆಗ್ರಹಿಸಿದ್ದವು.

ಆದರೆ ಉದಯನಿಧಿ ಆರೋಪಗಳನ್ನು ಸಂಪೂರ್ಣ ತಳ್ಳಿಹಾಕಿದ್ದು, “ಯಾರ ಹೆಸರನ್ನೂ ಉಲ್ಲೇಖಿಸಿಲ್ಲ. ನನ್ನ ಹೇಳಿಕೆಯನ್ನು ರಾಜಕೀಯವಾಗಿ ತಿರುಚಲಾಗಿದೆ” ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ತನಿಖೆಗೆ ಸಹಕರಿಸುವಂತೆ ಸೂಚಿಸಿ, ವಿಚಾರಣೆ ಬಳಿಕ ಬಿಡುಗಡೆ ಮಾಡಲು ಆದೇಶಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img