HomeGadag Newsಗದಗ–ಸಿಂಗಾಪುರ ಶಾಲೆಗಳ ವಿದ್ಯಾರ್ಥಿಗಳ ಅಂತರರಾಷ್ಟ್ರೀಯ ಸಂವಾದ

ಗದಗ–ಸಿಂಗಾಪುರ ಶಾಲೆಗಳ ವಿದ್ಯಾರ್ಥಿಗಳ ಅಂತರರಾಷ್ಟ್ರೀಯ ಸಂವಾದ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಾಲ ವಿನಾಯಕ ವಿದ್ಯಾನಿಕೇತನ (ಬಿವಿವಿ) ಶಾಲೆ ಹಾಗೂ ಸಿಂಗಾಪುರದ ಬೆಂಡೆಮಿಯರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ನಡುವೆ ಆನ್‌ಲೈನ್ ಮೂಲಕ ಅಂತರರಾಷ್ಟ್ರೀಯ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಬಿವಿವಿ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳೇ ಶಿಕ್ಷಕರಾಗಿ ಹಾಗೂ ಶಾಲಾ ಆಡಳಿತ ನಿರ್ವಹಿಸುವ ಪದ್ಧತಿ, ‘ಸಂಗಮ’ ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ ಬೆಳೆಸುವ ವಿಧಾನವನ್ನು ಪರಿಚಯಿಸಿದರು. ಈ ಕಾರ್ಯಕ್ರಮಗಳನ್ನು ತಮ್ಮ ಶಾಲೆಯಲ್ಲೂ ಅಳವಡಿಸಿಕೊಳ್ಳುವುದಾಗಿ ಸಿಂಗಾಪುರ ಶಾಲೆಯ ಪ್ರಾಚಾರ್ಯೆ ಟಾನ್ ಲಿಂ ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದರು.

ಸಿಂಗಾಪುರದ ವಿದ್ಯಾರ್ಥಿಗಳು ತಮ್ಮ ಶಾಲೆಯ ‘ಬಡಿ ಪೇರಿಂಗ್’ ಪದ್ಧತಿಯ ಕುರಿತು ವಿವರಿಸಿ, ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಶಾಲಾ ಶಿಸ್ತು ಮತ್ತು ಹೊಂದಾಣಿಕೆಯ ಕುರಿತು ಮಾರ್ಗದರ್ಶನ ನೀಡುವ ವಿಧಾನವನ್ನು ಹಂಚಿಕೊಂಡರು.

ಬಿವಿವಿ ಶಾಲೆಯ ನಿರ್ದೇಶಕ ವಿನಾಯಕ ಆರ್. ಕಾರ್ಯಕ್ರಮವನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಉಭಯ ಶಾಲೆಗಳ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ, ಕೊನೆಯಲ್ಲಿ ಪರಸ್ಪರ ಶಾಲಾ ಗೀತೆಗಳಿಗೆ ಗೌರವ ಸಲ್ಲಿಸಿದರು.

ಶಾಲೆಯ ಕಾರ್ಯದರ್ಶಿ ರವಿ ಎಸ್., ಇಎಲ್‌ಸಿ ಅಧ್ಯಕ್ಷೆ ಮಲ್ಲಿಕಾ ಆರ್., ಉಪನಿರ್ದೇಶಕಿ ಗಾಯತ್ರಿ ವಿ., ಪ್ರಾಚಾರ್ಯ ವಿ.ಎಂ. ಅಡ್ನೂರ, ಉಪಪ್ರಾಚಾರ್ಯ ಪಿ.ಜಿ. ಬ್ಯಾಳಿ ಸೇರಿದಂತೆ ಶಿಕ್ಷಕ ವೃಂದ ಕಾರ್ಯಕ್ರಮಕ್ಕೆ ಅಭಿನಂದನೆ ಸಲ್ಲಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img