HomeGadag Newsಕಪ್ಪತ್ತಗುಡ್ಡದ ಮಡಿಲಲ್ಲಿ ಕವಿತೆಗಳ ಕಂಪು: ಮಳೆಯ ನಡುವೆ ಕವಿ ಸಮ್ಮೇಳನಕ್ಕೆ ತೆರೆ

ಕಪ್ಪತ್ತಗುಡ್ಡದ ಮಡಿಲಲ್ಲಿ ಕವಿತೆಗಳ ಕಂಪು: ಮಳೆಯ ನಡುವೆ ಕವಿ ಸಮ್ಮೇಳನಕ್ಕೆ ತೆರೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಮಳೆಯ ಸಿಂಚನದ ನಡುವೆಯೇ ಕವಿಗಳು ಕವಿತೆಗಳನ್ನು ವಾಚಿಸುವ ಮೂಲಕ ಕಪ್ಪತ್ತಗುಡ್ಡದ ಪರಿಸರದಲ್ಲಿ ನಡೆದ ಜಿಲ್ಲಾ ಮಟ್ಟದ ಕವಿ ಸಮ್ಮೇಳನದ ಸಮಾರೋಪ ಸಮಾರಂಭ ಗಮನ ಸೆಳೆಯಿತು.

ಕವಿಗಳು ಜನಮಾನಸವನ್ನು ತಿದ್ದುವ ಶಕ್ತಿ ಹೊಂದಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಕವಿಗಳಿಗೆ ಅಪಾರ ಮನ್ನಣೆ ಇದೆ. ಕಪ್ಪತ್ತಗುಡ್ಡದ ಪರಿಸರ ಹೊಸ ಕವಿಗಳಿಗೆ ಬರವಣಿಗೆಯ ಚೈತನ್ಯ ಹಾಗೂ ಸ್ಫೂರ್ತಿ ನೀಡಲಿ ಎಂದು ಬಸವಬೆಟ್ಟ ಕಡಕೋಳ-ಕಪ್ಪತಗಿರಿಯ ಶರಣೆ ಓಂಕಾರೇಶ್ವರಿ ಮಾತಾಜಿ ಹೇಳಿದರು.

ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ತಾಲೂಕುಗಳ ಕನ್ನಡ ಸಾಹಿತ್ಯ ಪರಿಷತ್ತುಗಳ ಆಶ್ರಯದಲ್ಲಿ ಕಪ್ಪತ್ತಗುಡ್ಡದ ಸೆರಗಿನ ದೇವರೆಡ್ಡಿ ಅಗಸನಕೊಪ್ಪ ಕೃಷಿ ಆಶ್ರಮದಲ್ಲಿ ನಡೆದ ಜಿಲ್ಲಾ ಮಟ್ಟದ ಕವಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಸಮ್ಮೇಳನದಲ್ಲಿ ವಾಚಿಸಲಾದ ಕವಿತೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗುವುದು. ಉತ್ತಮ ಕವಿತೆಗಳು ಅಧ್ಯಯನಶೀಲತೆಯಿಂದ ಮೂಡಿಬರುತ್ತವೆ. ಕಮ್ಮಟಗಳನ್ನು ಸಂಘಟಿಸುವ ಮೂಲಕ ಯುವ ಕವಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ದೇವರೆಡ್ಡಿ ಅಗಸನಕೊಪ್ಪ, ಬಸವರಾಜ ಪಲ್ಲೇದ ಮಾಗಡಿ, ಸಮ್ಮೇಳನ ಸಂಯೋಜಕರಾದ ಸುರೇಶ ಕುಂಬಾರ, ರಮಾಕಾಂತ ಕಮತಗಿ, ಪಿ.ಆರ್. ಹಿರೇಮಠ, ನಿಂಗಪ್ಪ ಮಾಚೇನಹಳ್ಳಿ, ಶರಣಪ್ಪ ಹರ್ಲಾಪೂರ, ಪ್ರಗತಿಪರ ರೈತರಾದ ಯಲ್ಲಪ್ಪ ನಾವಿ, ಕಡಕೋಳ ಹಾಗೂ ತಿಪ್ಪಣ್ಣ ಕೆಳಗಡೆ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ರಾಷ್ಟ್ರಧ್ವಜಾರೋಹಣವನ್ನು ಸುಶೀಲಮ್ಮ ಅಗಸನಕೊಪ್ಪ, ನಾಡಧ್ವಜಾರೋಹಣವನ್ನು ಮಾಜಿ ಸಚಿವ ಎಸ್.ಎಸ್. ಪಾಟೀಲ ಕಲಕೇರಿ ಹಾಗೂ ಪರಿಷತ್ ಧ್ವಜಾರೋಹಣವನ್ನು ವಿವೇಕಾನಂದಗೌಡ ಪಾಟೀಲ ನೆರವೇರಿಸಿದರು.

ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ಹಾಗೂ ಸಾಮರಸ್ಯ ನಡಿಗೆಯನ್ನು ನಂದಿವೇರಿಮಠದ ಶಿವಕುಮಾರಸ್ವಾಮಿಗಳ ಸಮ್ಮುಖದಲ್ಲಿ ಶ್ರೀ ಕಪ್ಪತ್ತಮಲ್ಲೇಶ್ವರ ತೋಟಗಾರಿಕೆ ರೈತ ಉತ್ಪಾದಕ ಕಂಪನಿ ಶಿರಹಟ್ಟಿ-ಕಡಕೋಳ ಅಧ್ಯಕ್ಷ ತಿಪ್ಪಣ್ಣ ಕೊಂಚಿಗೇರಿ ಉದ್ಘಾಟಿಸಿದರು. ಕೆ.ಎ. ಬಳಿಗೇರ, ವೀರಣ್ಣ ಮಜ್ಜಗಿ, ರುದ್ರಣ್ಣ ಗುಳಗುಳಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ವಿವಿಧ ಕಲಾ ತಂಡಗಳಿಂದ ಕಲಾ ಪ್ರದರ್ಶನ ನಡೆಯಿತು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img