ವಿಜಯಪುರ: ಚಾಕಲೇಟ್ ಕದ್ದಿದ್ದಾನೆ ಎಂಬ ಆರೋಪಕ್ಕೆ ಬಾಲಕನಿಗೆ ಹಲ್ಲೆ ನಡೆಸಿದ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆಲಮೇಲ ತಾಲೂಕಿನ ಮಲಘಾಣ ಗ್ರಾಮದಲ್ಲಿ ನಡೆದ ಘಟನೆ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಮಲಘಾಣ ಗ್ರಾಮದ ಅಂಗಡಿಯೊಂದರಲ್ಲಿ ಚಾಕಲೇಟ್ ಕದ್ದಿದ್ದಾನೆ ಎಂದು ಆರೋಪಿಸಿ ಅಂಗಡಿ ಮಾಲೀಕ ಅಶೋಕ್ ಪತ್ತಾರ ಬಾಲಕನಿಗೆ ಥಳಿಸಿದ್ದಾನೆ ಎನ್ನಲಾಗಿದೆ.
ಬಾಲಕನ ಮೇಲೆ ಹಲ್ಲೆ ನಡೆಸಿದ ವಿಚಾರ ತಿಳಿದ ಬಳಿಕ ಆತನ ತಂದೆ ರೆಹಮಾನ್ ವಾಲೀಕಾರ್ ಅವರು ಆಲಮೇಲ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಹಲ್ಲೆ ಆರೋಪ ಎದುರಿಸುತ್ತಿರುವ ಅಂಗಡಿ ಮಾಲೀಕ ಅಶೋಕ್ ಪತ್ತಾರನನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.



