HomeGadag Newsವಿದೇಶದಲ್ಲಿ ಉನ್ನತ ಶಿಕ್ಷಣಕ್ಕೆ ಅವಕಾಶ: ಸೆ.6ರಂದು ಬೆಂಗಳೂರಿನಲ್ಲಿ ‘Study Abroad-2026’

ವಿದೇಶದಲ್ಲಿ ಉನ್ನತ ಶಿಕ್ಷಣಕ್ಕೆ ಅವಕಾಶ: ಸೆ.6ರಂದು ಬೆಂಗಳೂರಿನಲ್ಲಿ ‘Study Abroad-2026’

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ‘ವಿದೇಶದಲ್ಲಿ ಅಧ್ಯಯನ-2026’ (Study Abroad-2026) ಕಾರ್ಯಕ್ರಮವನ್ನು ಸೆಪ್ಟೆಂಬರ್ 6ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮವು ಅಂತರರಾಷ್ಟ್ರೀಯ ಏಜೆನ್ಸಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ಕಾರ್ಯಕ್ರಮವು ಬೆಂಗಳೂರಿನ ಗೇಟ್ ನಂ. 4, ಗಾಯತ್ರಿ ಗ್ರೌಂಡ್, ಗಾಯತ್ರಿ ವಿಹಾರ ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆಯಲಿದೆ. ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ವಿದೇಶಗಳ 75ಕ್ಕೂ ಹೆಚ್ಚು ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸಲಿವೆ. ವಿದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳ ಪ್ರವೇಶ ಪ್ರಕ್ರಿಯೆ, ವಿದ್ಯಾರ್ಥಿ ವೀಸಾ, ಹಣಕಾಸು ಯೋಜನೆ, ಅರ್ಜಿ ಸಲ್ಲಿಕೆ, ಆರೋಗ್ಯ ವಿಮೆ ಹಾಗೂ ಭಾಷಾ ಪ್ರಾವೀಣ್ಯತೆ ಕುರಿತು ಒಂದೇ ವೇದಿಕೆಯಲ್ಲಿ ಮಾರ್ಗದರ್ಶನ ನೀಡಲಾಗುವುದು.

ಹಾಗೆಯೇ, ವಿದ್ಯಾರ್ಥಿಗಳಿಗೆ ವೈಯಕ್ತಿಕ ಸಮಾಲೋಚನೆ (One-on-One Sessions), ಸ್ಥಳದಲ್ಲೇ ವಿದ್ಯಾರ್ಥಿವೇತನ ಹಾಗೂ ಅರ್ಹತಾ ಮೌಲ್ಯಮಾಪನ (Spot Scholarship & Eligibility Assessment), ವಿಶ್ವವಿದ್ಯಾಲಯ ಪ್ರವೇಶ ಮಾರ್ಗದರ್ಶನ, ವೀಸಾ ಮಾರ್ಗದರ್ಶನ, ಹಣಕಾಸು ಯೋಜನೆ, ಅರ್ಜಿ ಸಲ್ಲಿಕೆಗೆ ನೆರವು, ಆರೋಗ್ಯ ವಿಮೆ ಮಾರ್ಗದರ್ಶನ ಹಾಗೂ ಭಾಷಾ ಪ್ರಾವೀಣ್ಯತೆಗಾಗಿ ಅಗತ್ಯ ಸಹಕಾರ ಸೇರಿದಂತೆ ಎಂಟು ಪ್ರಮುಖ ಅಂಶಗಳ ಕುರಿತು ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುವುದು.

ವಿದ್ಯಾರ್ಥಿಗಳಿಗೆ ಶೇ. 50ರವರೆಗೆ ವಿದ್ಯಾರ್ಥಿವೇತನ ಪಡೆಯುವ ಅವಕಾಶಗಳ ಬಗ್ಗೆಯೂ ಮಾಹಿತಿ ನೀಡಲಾಗುವುದು. ಪದವಿ (Under Graduate), ಸ್ನಾತಕೋತ್ತರ (Post Graduate), ಡಾಕ್ಟರೇಟ್, ಡಿಪ್ಲೊಮಾ, ವೃತ್ತಿಪರ ಹಾಗೂ ಇತರ ಉನ್ನತ ಶಿಕ್ಷಣ ಕೋರ್ಸ್‌ಗಳಿಗಾಗಿ ವಿದೇಶಗಳ ಜಾಗತಿಕ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಮಹತ್ವದ ಅವಕಾಶವಾಗಿದೆ.

ಆಸಕ್ತ ವಿದ್ಯಾರ್ಥಿಗಳು studyabroad.ksdckarnataka.com ವೆಬ್‌ಸೈಟ್ ಅಥವಾ ಕ್ಯೂಆರ್ ಕೋಡ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 106, ಜಿಲ್ಲಾಧಿಕಾರಿ ಕಚೇರಿ, ಗದಗ ಅಥವಾ ಮೊಬೈಲ್ ಸಂಖ್ಯೆ 8618650935, 9481856181, 9481008754, 8722762768, 9686352815 ಹಾಗೂ 9008234012ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img