HomeKarnataka Newsಕಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ: ಡಿಕೆಶಿ ಪ್ರವಾಸದ ಬೆನ್ನಲ್ಲೇ ಪಾಲಿಕೆಯಿಂದ ತೆರವು!

ಕಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ: ಡಿಕೆಶಿ ಪ್ರವಾಸದ ಬೆನ್ನಲ್ಲೇ ಪಾಲಿಕೆಯಿಂದ ತೆರವು!

For Dai;y Updates Join Our whatsapp Group

ಕಲಬುರಗಿ: ನಗರದ ಹೈಕೋರ್ಟ್ ಕ್ರಾಸ್ ಬಳಿ ಯಾವುದೇ ಪೂರ್ವಾನುಮತಿ ಪಡೆಯದೆ ರಾತ್ರೋರಾತ್ರಿ ಗುಂಪೊಂದು ಪ್ರತಿಷ್ಠಾಪಿಸಿದ್ದ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಮಹಾನಗರ ಪಾಲಿಕೆ ಸಿಬ್ಬಂದಿ ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವುಗೊಳಿಸಿದ್ದಾರೆ.

ಸಿಎಂ ಪ್ರವಾಸದ ಮಾರ್ಗದಲ್ಲೇ ಮೂರ್ತಿ ಸ್ಥಾಪನೆ: ಸೆಪ್ಟೆಂಬರ್ 16 ರಂದು ರಾತ್ರಿ ಏಳೆಂಟು ಜನರಿದ್ದ ಗುಂಪೊಂದು ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಇಲ್ಲದೆ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಸ್ಥಾಪನೆ ಮಾಡಿತ್ತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲಬುರಗಿ ಪ್ರವಾಸದಲ್ಲಿದ್ದು, ಇದೇ ಮಾರ್ಗದಲ್ಲೇ ಸಂಚರಿಸಬೇಕಿತ್ತು. ಸಿಎಂ ಆಗಮನದ ವೇಳೆಯಲ್ಲೇ ಈ ರೀತಿ ಪ್ರತಿಮೆ ಸ್ಥಾಪನೆಯಾಗಿದ್ದು ಸ್ಥಳದಲ್ಲಿ ಚರ್ಚೆಗೆ ಕಾರಣವಾಗಿತ್ತು.

ಪಾಲಿಕೆಯಿಂದ ಮೂರ್ತಿ ತೆರವು ಕಾರ್ಯಾಚರಣೆ: ಯಾವುದೇ ಅನುಮತಿ ಪಡೆಯದೆ ಪ್ರತಿಷ್ಠಾಪನೆ ಮಾಡಿದ್ದ ಹಿನ್ನೆಲೆಯಲ್ಲಿ, ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಮೂರ್ತಿಯನ್ನು ತೆರವುಗೊಳಿಸಿದ್ದಾರೆ. ಈ ಹಿಂದೆ 2-3 ವರ್ಷಗಳ ಹಿಂದೆಯೂ ಸಹ ಯಾವುದೇ ಅನುಮತಿ ಪಡೆಯದೇ ಇದೇ ಸ್ಥಳದಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರದ ಬ್ಯಾನರ್ ಅಳವಡಿಸಿ, ‘ಸಿದ್ದರಾಮಯ್ಯ ಸರ್ಕಲ್’ ನಿರ್ಮಾಣ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img