ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿಯಿಂದಾಗಿ 400ಕ್ಕೂ ಅಧಿಕ ಹತ್ತಿ ಚೀಲಗಳು ಸುಟ್ಟು ಕರಕಲಾಗಿರುವ ಘಟನೆ ಜರುಗಿದೆ.
ಘಟನೆಯಲ್ಲಿ ನಾಗಯ್ಯ ಮಿಣಜಗಿ ಎಂಬ ರೈತನಿಗೆ ಸೇರಿದ್ದ ಹತ್ತಿ ಚೀಲಗಳು ಬೆಂಕಿಗಾಹುತಿಯಾಗಿದೆ. ಹಳೆಯ ಪಾಳುಬಿದ್ದ ಶಾಲೆಯ ಕಟ್ಟಡದಲ್ಲಿ ನಾಗಯ್ಯ ಅವರು ಹತ್ತಿ ಚೀಲಗಳನ್ನು ಸಂಗ್ರಹಸಿಟ್ಟಿದ್ದರು.
ಏಕಾಏಕಿ ಹತ್ತಿ ಚೀಲಗಳಿಗೆ ಬೆಂಕಿ ಆವರಿಸಿದ ಪರಿಣಾಮ 400ಕ್ಕೂ ಅಧಿಕ ಚೀಲಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಂದಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



