HomeGadag Newsಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿ ನಂತರ ಕರ್ನಾಟಕದಲ್ಲಿ ಪ್ರವಾಸ ಮಾಡಿ

ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿ ನಂತರ ಕರ್ನಾಟಕದಲ್ಲಿ ಪ್ರವಾಸ ಮಾಡಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದಲ್ಲಿ ಸುಳ್ಳು ಗ್ಯಾರಂಟಿಗಳನ್ನು ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದ ಆಡಳಿತ ನಡೆಸುವಲ್ಲಿ ಸಂಪೂರ್ಣ ಕುಸಿದಿದ್ದು, ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ ಹಾಗೂ ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ ರಾಹುಲ್ ಗಾಂಧಿಯವರಿಗೆ ಒತ್ತಾಯಿಸಿದ್ದಾರೆ.

ಅವರು ಪಕ್ಷದ ಕಾರ್ಯಾಲಯದಲ್ಲಿ ಗುರುವಾರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ 11 ತಿಂಗಳು ಕಳೆದರೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಆರ್ಥಿಕವಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ. ವರ್ಗಾವಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಇದರ ಹೊಣೆ ಹೊರುತ್ತೀರಾ ಎಂದು ರಾಹುಲ್ ಗಾಂಧಿಯವರನ್ನು ಪ್ರಶ್ನಿಸಿದ್ದಾರೆ.

ಗ್ಯಾರಂಟಿ ಹೆಸರಿನಲ್ಲಿ ಬೆಲೆ ಏರಿಕೆ, ವಿದ್ಯುತ್ ದರ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ದರ ಹೆಚ್ಚಳ ಮಾಡಲಾಗಿದೆ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿ ನಂತರ ಕರ್ನಾಟಕದಲ್ಲಿ ಪ್ರವಾಸ ಮಾಡಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ, ಪ್ರಧಾನ ಕಾರ್ಯದರ್ಶಿ ಪಕ್ಕಿರೇಶ ರಟ್ಟಿಹಳ್ಳಿ, ನಗರ ಅಧ್ಯಕ್ಷ ಅನಿಲ ಅಬ್ಬಿಗೇರಿ, ಮಾಧ್ಯಮ ಪ್ರಮುಖ ರಾಜು ಹೊಂಗಲ ಒತ್ತಾಯಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!