HomeEntertainmentಎ.ಆರ್ ರೆಹಮಾನ್ , ಸೈರಾ ಬಾನು ವಿಚ್ಚೇದನ: ಕೊನೆಗೂ ಬಯಲಾಯ್ತು ಕಾರಣ

ಎ.ಆರ್ ರೆಹಮಾನ್ , ಸೈರಾ ಬಾನು ವಿಚ್ಚೇದನ: ಕೊನೆಗೂ ಬಯಲಾಯ್ತು ಕಾರಣ

For Dai;y Updates Join Our whatsapp Group

Spread the love

ಆರ್ ರೆಹಮಾನ್ ಹಾಗೂ ಪತ್ನಿ ಸೈರಾ ಬಾನು ಏಕಾಏಕಿ ಡಿವೋರ್ಸ್ ಘೋಷಿಸಿ ಪ್ರತಿಯೊಬ್ಬರಿಗೂ ಶಾಕ್ ನೀಡಿದ್ದಾರೆ. 29 ವರ್ಷಗಳ ದಾಂಪತ್ಯ ಜೀವನಕ್ಕೆ ಜೋಡಿ ಕೊನೆ ಹಾಡಿದ್ದಾರೆ. ಬೇರೆ ಬೇರೆಯಾಗುತ್ತಿರುವ ಬಗ್ಗೆ ಆಗುವ ರೆಹಮಾನ್ ಹಾಗೂ ಸೈರಾ ತಿಳಿಸಿದ್ದಾರೆ. ಇದೀಗ ವಿಚ್ಛೇದನಕ್ಕೆ ಕಾರಣ ಏನು ಎಂಬುದು ಬಯಲಾಗಿದೆ.

ಕೈತುಂಬ ಕೆಲಸ ಇರುವ ರೆಹಮಾನ್ ವರ್ಷದ ಎಲ್ಲಾ ದಿನಗಳಲ್ಲೂ ಸಖತ್ ಬ್ಯುಸಿಯಾಗಿರ್ತಾರೆ ಅವರು ತಂಡದ ಜೊತೆ ಕಾನ್ಸರ್ಟ್ ನಡೆಸುತ್ತಾರೆ. ಒಂದೊಮ್ಮೆ ಕಾನ್ಸರ್ಟ್ ಇಲ್ಲ ಎಂದಾದರೆ ಹಾಡಿನ ಕಂಪೋಸ್​ನಲ್ಲಿ ಬ್ಯುಸಿ ಆಗುತ್ತಾರೆ. ಈ ಕಾರಣಕ್ಕೆ ಅವರು ನಿದ್ರಿಸೋದು ಮುಂಜಾನೆ ವೇಳೆಗೆ. ಅವರು ನಿದ್ದೆಯಿಂದ ಎದ್ದೇಳುವಾಗ ಮಧ್ಯಾಹ್ನ ಆಗುತ್ತದೆ. ಇದು ಅವರ ದಿನಚರಿ. ಈ ಕಾರಣಕ್ಕೆ ಕುಟುಂಬಕ್ಕೆ ಅವರು ಹೆಚ್ಚು ಸಮಯ ನೀಡಲು ಸಾಧ್ಯವಾಗುತ್ತಿರಲಿಲ್ಲ. ಇದು ವಿಚ್ಛೇದನಕ್ಕೆ ಕಾರಣ ಆಗಿರಬಹುದು ಎಂಬುದು ಕೆಲವರ ವಾದ.

ಸೈರಾ ಬಾನು ಅವರು ವಿಚ್ಛೇದನಕ್ಕೆ ಕಾರಣ ಏನು ಎಂಬ ಬಗ್ಗೆ ಮಾತನಾಡಿದ್ದಾರೆ ಎಂದು ವರದಿ ಆಗಿದೆ. ‘ಸಂಬಂಧದಲ್ಲಿನ ಭಾವನಾತ್ಮಕ ಒತ್ತಡದಿಂದಾಗಿ ವಿಚ್ಛೇದನ ಪಡೆದಿರುವುದಾಗಿ’ ಸೈರಾ ಹೇಳಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ದಂಪತಿ ಕಡೆಯಿಂದ ಯಾವುದೇ ಸ್ಪಷ್ಟ ಹೇಳಿಕೆ ಬಂದಿಲ್ಲ.

ರೆಹಮಾನ್ ಅವರಿಗೆ ಈಗಲೂ ಮಾಜಿ ಪತ್ನಿ ಮೇಲೆ ಗೌರವ ಹಾಗೆಯೇ ಇದೆ ಎನ್ನಲಾಗಿದೆ. ಇವರು ಬರೋಬ್ಬರಿ 29 ವರ್ಷಗಳ ಕಾಲ ಒಟ್ಟಾಗಿ ಸಂಸಾರ ನಡೆಸಿದ್ದರು. ಕಳೆದ ವರ್ಷ ಕಸ್ತೂರಿ ಶಂಕರ್ ಅವರು ಸೈರಾ ಬಾನು ಬಗ್ಗೆ ಟೀಕೆ ಮಾಡಿದ್ದರು. ಅವರಿಗೆ ತಮಿಳು ಬರುವುದಿಲ್ಲ ಎಂದಿದ್ದರು. ಈ ಸಂದರ್ಭದಲ್ಲಿ ಅವರು ಸೈರಾ ಪರ ಮಾತನಾಡಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!