HomeBengaluru Newsಪಿಂಚಣಿ ಪಡೆಯುವವರ ಗಮನಕ್ಕೆ: ದಾಖಲೆ ಇಲ್ಲದಿದ್ದರೆ ನಿಮ್ಮ ಖಾತೆಯೂ ರದ್ದಾಗುತ್ತೆ ಎಚ್ಚರ!

ಪಿಂಚಣಿ ಪಡೆಯುವವರ ಗಮನಕ್ಕೆ: ದಾಖಲೆ ಇಲ್ಲದಿದ್ದರೆ ನಿಮ್ಮ ಖಾತೆಯೂ ರದ್ದಾಗುತ್ತೆ ಎಚ್ಚರ!

For Dai;y Updates Join Our whatsapp Group

Spread the love

ಬೆಂಗಳೂರು: ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬಳಿಕ ಇದೀಗ ಪಿಂಚಣಿ ಯೋಜನೆಗಳಲ್ಲೂ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಅನರ್ಹರು ಪಿಂಚಣಿ ಪಡೆಯುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಸಂಯೋಜನೆ ಆ್ಯಪ್ ಮೂಲಕ ಫಲಾನುಭವಿಗಳ ಪರಿಶೀಲನೆ ನಡೆಸಿ, ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ವಿವಿಧ ಪಿಂಚಣಿ ಯೋಜನೆಗಳಡಿ ಒಟ್ಟು 83,11,493 ಫಲಾನುಭವಿಗಳಿದ್ದು, ಪ್ರಾಥಮಿಕ ಪರಿಶೀಲನೆಯಲ್ಲಿ 23,13,664 ಖಾತೆಗಳ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಮಗ್ರ ಪರಿಶೀಲನೆ ಆರಂಭಿಸಿದೆ.

ಸಂದೇಹಾಸ್ಪದ ಖಾತೆಗಳ ಪೈಕಿ 3,35,610 ಫಲಾನುಭವಿಗಳು ಪಿಂಚಣಿಗೆ ಅರ್ಹರಾಗಿದ್ದಾರೆ ಎಂದು ಗ್ರಾಮ ಆಡಳಿತಾಧಿಕಾರಿಗಳ ವರದಿಯಲ್ಲಿ ದೃಢಪಟ್ಟಿದೆ. ಉಳಿದ ಪ್ರಕರಣಗಳ ಪರಿಶೀಲನೆ ಮುಂದುವರಿದಿದೆ.

ಮೇ ತಿಂಗಳಲ್ಲಿ 63,04,554 ಫಲಾನುಭವಿಗಳಿಗೆ ಪಿಂಚಣಿ ಪಾವತಿಸಲಾಗಿದ್ದು, ತಪ್ಪು ಮಾಹಿತಿ ಅಥವಾ ನಕಲಿ ದಾಖಲೆ ಸಲ್ಲಿಸಿ ಪಿಂಚಣಿ ಪಡೆಯುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ವಯಸ್ಸಿನ ದೃಢೀಕರಣ ಸೇರಿದಂತೆ ವಿವಿಧ ದಾಖಲೆಗಳಲ್ಲಿ ಅಕ್ರಮ ಕಂಡುಬಂದವರ ಪಿಂಚಣಿಯನ್ನು ರದ್ದುಪಡಿಸಲಾಗಿದೆ.

ಪರಿಶೀಲನೆ ವೇಳೆ ದಾಖಲೆ ಸಲ್ಲಿಸದ, ನೀಡಿದ ವಿಳಾಸದಲ್ಲಿ ವಾಸವಿಲ್ಲದ ಹಾಗೂ ಆದಾಯ ಪ್ರಮಾಣಪತ್ರ ಒದಗಿಸದ 16,42,303 ಫಲಾನುಭವಿಗಳ ಪಿಂಚಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಸಂಬಂಧ ಕಂದಾಯ ಇಲಾಖೆ ನೋಟಿಸ್ ನೀಡಲಿದ್ದು, ಸಂಬಂಧಪಟ್ಟ ಫಲಾನುಭವಿಗಳು 30 ದಿನಗಳೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ತಮ್ಮ ಅರ್ಹತೆಯನ್ನು ಸಾಬೀತುಪಡಿಸಬೇಕಿದೆ.

ಕಂದಾಯ ಇಲಾಖೆ ಜಂಟಿ ನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದು, ಪಿಂಚಣಿ ಯೋಜನೆಗಳು ನಿಜವಾದ ಅರ್ಹರಿಗೆ ತಲುಪುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!