HomeGadag Newsಯೋಗದಿಂದ ಮನಸ್ಸು, ದೇಹದ ಸಮತೋಲನ

ಯೋಗದಿಂದ ಮನಸ್ಸು, ದೇಹದ ಸಮತೋಲನ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಭಾರತದ ಯೋಗ ಶಾಸ್ತ್ರವು ಜಗತ್ತಿಗೆ ವ್ಯಾಪಿಸಿದ್ದಲ್ಲದೆ, ಜಗತ್ತನ್ನು ಒಂದುಗೂಡಿಸುವ ಕೆಲಸವನ್ನು ಮಾಡುತ್ತಿದೆ. 2000 ವರ್ಷಗಳ ಹಿಂದೆ ಪತಂಜಲಿ ಯೋಗ ಸೂತ್ರವನ್ನು ಕೊಟ್ಟರು. ಮಾನವನ ಮನಸ್ಸು ದೇಹ ಮತ್ತು ಆತ್ಮದ ಸಮತೋಲನವನ್ನು ಯೋಗ ಮಾಡುತ್ತದೆ. ಭಾರತೀಯ ದರ್ಶನದಲ್ಲಿ ಯೋಗ ತುಂಬಾ ಮಹತ್ವದ್ದು ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

ಲಿಂಗಾಯತ ಪ್ರಗತಿಶೀಲ ಸಂಘದ ವತಿಯಿಂದ ನಡೆದ 2751ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಅಂಗ-ಲಿಂಗ ಸಂಯೋಗವೇ ಯೋಗ. ಅಂಗವೇ ಆತ್ಮ. ಲಿಂಗವೇ ಪರಮಾತ್ಮ. ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯವನ್ನು ನೀಡುವುದು ಯೋಗ. ಸಾಮರಸ್ಯದ ಕೆಲಸವನ್ನು ಯೋಗ ಮಾಡುತ್ತದೆ. ಯೋಗದ ಬೇರು ನಮ್ಮ ಭಾರತ. ಅತ್ಯಂತ ಹಳೆಯ ವಿಜ್ಞಾನದಲ್ಲಿ ಯೋಗವೂ ಒಂದಾಗಿದೆ. ದೈಹಿಕ, ಮಾನಸಿಕ ಯೋಗಕ್ಷೇಮದೊಂದಿಗೆ ಆಧ್ಯಾತ್ಮಿಕ ವಿಕಸನ ಸಂರಕ್ಷಣೆಯಲ್ಲಿಯೂ ಯೋಗ ಉಪಯುಕ್ತವಾಗಿದೆ ಎಂದು ಆಶೀರ್ವಚನ ನೀಡಿದರು.

ಡಾ. ಚಂದ್ರಮೌಳಿ ನಾಯ್ಕರ ಅವರ `ಗೋರಕ್ಷ ಸಂಹಿತೆ ಹಾಗೂ ಯೋಗ ಬೀಜ’ ಪುಸ್ತಕ ಬಿಡುಗಡೆ ಮಾಡಲಾಯಿತು. ನೀಟ್ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆದ ಸೃಜನ್ ವೀರಬಸಪ್ಪ ಮುರಗಿ ಇವರನ್ನು ಸನ್ಮಾನಿಸಲಾಯಿತು. ಯೋಗಾಚಾರ್ಯ ಕೆ.ಎಸ್. ಪಲ್ಲೇದ ನೆತೃತ್ವದಲ್ಲಿ ಎಸ್.ವಾಯ್.ಬಿ.ಎಂ.ಎಸ್ ಯೋಗ ಪಾಠಶಾಲಾ ಪ್ರಶಿಕ್ಷಣಾರ್ಥಿಗಳಿಂದ ಆಕರ್ಷಕವಾದ ಯೋಗಾಸನ ಪ್ರದರ್ಶನ ನಡೆಯಿತು. ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ್ ಸುತಾರ ವಚನ ಸಂಗೀತ ಸೇವೆಯನ್ನು ನಡೆಸಿಕೊಟ್ಟರು. ಧಾರ್ಮಿಕ ಗ್ರಂಥ ಪಠಣವನ್ನು ವರ್ಷಾ ಆರ್.ಮಳಜಿ ಹಾಗೂ ವಚನ ಚಿಂತನವನ್ನು ಸಾನ್ವಿ ಆರ್.ಪಾಟೀಲ ನಡೆಸಿಕೊಟ್ಟರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ಉಪಾಧ್ಯಕ್ಷ ಡಾ. ಉಮೇಶ ಪುರದವರು, ವಿದ್ಯಾ ಗಂಜಿಹಾಳ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸಹಕಾರ್ಯದರ್ಶಿ ಸೋಮನಾಥ ಪುರಾಣಿಕ, ನಾಗರಾಜ್ ಹಿರೇಮಠ, ಸಂಘಟನಾ ಕಾರ್ಯದರ್ಶಿ ಮಹೇಶ್ ಗಾಣಿಗೇರ, ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರ, ಶಿವಾನುಭವ ಸಮಿತಿಯ ಸಹ ಚೇರಮನ್ ಶಿವಾನಂದ ಹೊಂಬಳ, ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

ಐ.ಬಿ. ಬೆನಕೊಪ್ಪ ಸ್ವಾಗತಿಸಿದರು. ವಿದ್ಯಾಪ್ರಭು ಗಂಜಿಹಾಳ ಕಾರ್ಯಕ್ರಮ ನಿರೂಪಿಸಿದರು. ದಾಸೋಹ ಸೇವೆಯನ್ನು ಶರಣ ವೀರಬಸಪ್ಪ ಬಸಪ್ಪ ಮುರಗಿ ಹಾಗೂ ಕುಟುಂಬ ವರ್ಗದವರು ವಹಿಸಿದ್ದರು.

ಉಪನ್ಯಾಸಕರಾಗಿ ಆಗಮಿಸಿದ ಧಾರವಾಡದ ಕ.ವಿ.ವಿಯ ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಡಾ. ಚಂದ್ರಮೌಳಿ ನಾಯ್ಕರ ಮಾನತಾಡಿ, ಆರೋಗ್ಯ ಭಾಗ್ಯಕ್ಕೆ ಯೋಗ ಒಂದು ಸಾಧನ. ಅನೇಕ ಮಹಾತ್ಮರು ಯೋಗ, ತ್ಯಾಗ, ಮತ್ತು ಸಾಧನೆ ಮಾಡಿದ್ದರಿಂದ ಅವರಿಗೆ ಗೌರವ ಕೊಡುತ್ತೇವೆ. ಮನೆಯಲ್ಲಿದ್ದುಕೊಂಡು ಯೋಗ ಮಾರ್ಗದಲ್ಲಿ ಇರುವುದು, ಒಳ್ಳೆಯದಾಗಲಿ ಎನ್ನುವುದೇ ಅಹಿಂಸಾ ಸಂಕಲ್ಪ. ಯೋಗ ಸಾಧನೆ ಮಾಡಿ ಹೆಸರುಳಿಯುವಂತೆ ಬದುಕಬೇಕು, ಕೆಲಸ ಮಾಡಬೇಕು. ಪ್ರತಿಯೊಬ್ಬರೂ ಯೋಗ ಸಾಧನೆಯನ್ನು ಮಾಡಬೇಕು ಎಂದು ತಿಳಿಸಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!