ವಿಜಯಸಾಕ್ಷಿ ಸುದ್ದಿ, ಗದಗ: ಅಕ್ಷರ ದೀಪ ಫೌಂಡೇಶನ್, ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ಹಾಗೂ ವಿಜಯಪುರ ವತಿಯಿಂದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ವಿರಕ್ತಮಠದಲ್ಲಿ ವಾರ್ಷಿಕೋತ್ಸವ ಹಾಗೂ ಶರಣ ಸಾಹಿತ್ಯ ಸಮ್ಮೇಳನದದಲ್ಲಿ ಕಳಸಾಪೂರ ಗ್ರಾಮದ ಬಸವಕೇಂದ್ರದ ಕಾರ್ಯಾಧ್ಯಕ್ಷ, ಕನ್ನಡ ಚಿಂತಕ ಮಲ್ಲಿಕಾರ್ಜುನ ಖಂಡಮ್ಮನವರ ಅವರಿಗೆ `ಬಸವಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬಸವನಬಾಗೇವಾಡಿಯ ಶ್ರೀ ಮ.ನಿ.ಪ್ರ. ಸಿದ್ಧಲಿಂಗ ಮಹಾಸ್ವಾಮಿಗಳು ವಿರಕ್ತಮಠ, ಶ್ರೀ ಷ. ಬ್ರ. ಶಿವಪ್ರಕಾಶ ಶಿವಾಚಾರ್ಯರು ಪ್ರಶಸ್ತಿ ನೀಡಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಸಿದ್ಧರಾಮ ಬಿರಾದಾರ, ಶಿವಾನಂದ ಡೋಣೂರ, ವೀರಣ್ಣ ಮರ್ತುರ, ಜಯಶ್ರೀ ತೆಗ್ಗಿನಮಠ, ರೋಹಿಣಿ ಬಿ.ಮಿರ್ಜಿ, ಡಾ. ಮಹೇಂದ್ರ ಕುರ್ಡಿ, ಡಾ. ಪ್ರವೀಳಾ ಎಸ್.ಪಾಟೀಲ, ಪ್ರವೀಣಕುಮಾರ ಕನ್ಯಾಳ ಉಪಸ್ಥಿತರಿದ್ದರು.



