ಗದಗ: ರಸ್ತೆ ದಾಟುವ ವೇಳೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಪುನುಗು ಬೆಕ್ಕೊಂದು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಅರಷಿನಗೋಡಿ ಗ್ರಾಮದ ಬಳಿ ನಡೆದಿದೆ.
ಕಾಡು ಪ್ರದೇಶದ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ವಾಹನ ಪುನುಗು ಬೆಕ್ಕಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಅದು ಸಾವನ್ನಪ್ಪಿದೆ. ವಾಹನ ಸವಾರರು ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವುದು ತಿಳಿದುಬಂದಿದೆ.
ಈ ಭಾಗದಲ್ಲಿ ಕಾಡು ಪ್ರಾಣಿಗಳು ರಸ್ತೆ ದಾಟುವ ಸಂದರ್ಭಗಳು ಹೆಚ್ಚಾಗಿರುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಕಾಡು ಪ್ರಾಣಿಗಳನ್ನು ರಕ್ಷಿಸಲು ಸಹಕರಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.



