ಬೆಂಗಳೂರು: ಮೂರು ಉಪ ಚುನಾವಣೆಗಳಲ್ಲೂ ಕಾಂಗ್ರೆಸ್ ನಿಶ್ಚಿತವಾಗಿ ಗೆಲುವು ಸಾಧಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರೂ ಕಡೆ ಚುನಾವಣಾ ಪ್ರಚಾರ ಮುಗಿಸಿ ಬಂದಿದ್ದೇನೆ, ಇವತ್ತು ಮುಖ್ಯಮಂತ್ರಿಯವರನ್ನು ಕರೆದುಕೊಂಡು ಚನ್ನಪಟ್ಟಣಕ್ಕೆ ಹೋಗುತ್ತಿದ್ದೇನೆ, ಎಲ್ಲ ಕಡೆ ಬಹಳ ಚೆನ್ನಾಗಿ ರೆಸ್ಪಾನ್ಸ್ ಬಂದಿದೆ, ಮೂರು ಉಪ ಚುನಾವಣೆಗಳಲ್ಲೂ ಕಾಂಗ್ರೆಸ್ ನಿಶ್ಚಿತವಾಗಿ ಗೆಲುವು ಸಾಧಿಸಲಿದೆ,
ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎಂದರು. ಇನ್ನೂ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವ ಪ್ರಯತ್ನವನ್ನು ಬಿಜೆಪಿ ಮತ್ತು ಜೆಡಿಎಸ್ ಮಾಡುತ್ತಿವೆ, ದೇವೇಗೌಡರು ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಬೇಕೆಂದಿದ್ದಾರೆ, ಅದೇ ಕಾರಣಕ್ಕೆ ಜನ ಬಹಳ ಎಚ್ಚರಿಕೆ ಇರಬೇಕೆಂದು ಶಿವಕುಮಾರ್ ಹೇಳಿದರು.



