HomeIndia Newsಡಾಲ್ಫಿನ್ ಚಂಡಮಾರುತ ಎಫೆಕ್ಟ್: ಕೇರಳ ಸೇರಿ ದಕ್ಷಿಣ ಕರ್ನಾಟಕದಲ್ಲೂ ಧಾರಾಕಾರ ಮಳೆಯ ಮುನ್ಸೂಚನೆ!

ಡಾಲ್ಫಿನ್ ಚಂಡಮಾರುತ ಎಫೆಕ್ಟ್: ಕೇರಳ ಸೇರಿ ದಕ್ಷಿಣ ಕರ್ನಾಟಕದಲ್ಲೂ ಧಾರಾಕಾರ ಮಳೆಯ ಮುನ್ಸೂಚನೆ!

For Dai;y Updates Join Our whatsapp Group

ತಿರುವನಂತಪುರಂ: ಕೇರಳದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಪಶ್ಚಿಮ ಪೆಸಿಫಿಕ್ ಸಾಗರದಲ್ಲಿ ರೂಪುಗೊಂಡಿರುವ ಡಾಲ್ಫಿನ್ ಚಂಡಮಾರುತದ ಪರೋಕ್ಷ ಪರಿಣಾಮದಿಂದ ನೈರುತ್ಯ ಮಾನ್ಸೂನ್ ಮತ್ತಷ್ಟು ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ಪ್ರಕಾರ, ಶನಿವಾರದವರೆಗೆ ಕೇರಳ ಸೇರಿದಂತೆ ದಕ್ಷಿಣ ಕರ್ನಾಟಕ, ದಕ್ಷಿಣ ತಮಿಳುನಾಡು, ಪುದುಚೇರಿ ಹಾಗೂ ಬಂಗಾಳ ಕೊಲ್ಲಿಯ ವ್ಯಾಪ್ತಿಯ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಆಗಸ್ಟ್ ತಿಂಗಳ ಮೊದಲ ಐದು ದಿನಗಳಲ್ಲೇ ಕೇರಳದಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗಿರುವುದು ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, ಆಗಸ್ಟ್ 1ರಿಂದ 5ರವರೆಗೆ ರಾಜ್ಯದಲ್ಲಿ 226 ಮಿ.ಮೀ. ಮಳೆಯಾಗಿದ್ದು, ಇದೇ ಅವಧಿಯ ಸಾಮಾನ್ಯ ಮಳೆಯ ಪ್ರಮಾಣ 90.6 ಮಿ.ಮೀ. ಆಗಿದೆ. ಅಂದರೆ, ವಾಡಿಕೆಗಿಂತ ಶೇ.149ರಷ್ಟು ಅಧಿಕ ಮಳೆ ದಾಖಲಾಗಿದೆ.

ನಿರಂತರ ಮಳೆಯ ಪರಿಣಾಮ ಹಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಬಿಗಿಗೊಳಿಸಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕಿ ನೀತಾ ಕೆ. ಗೋಪಾಲ್, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭೂಮಿ ಸಂಪೂರ್ಣ ತೇವಾಂಶದಿಂದ ಕೂಡಿದ್ದು, ಹಲವೆಡೆ ಸಣ್ಣ ಪ್ರಮಾಣದ ಭೂಕುಸಿತಗಳು ವರದಿಯಾಗಿವೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಸುರಿಯುವ ಭಾರೀ ಮಳೆಯು ವಿಶೇಷವಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಅಪಾಯವನ್ನು ಮತ್ತಷ್ಟು ಹೆಚ್ಚಿಸಬಹುದು. ಆದ್ದರಿಂದ ಸಾರ್ವಜನಿಕರು ಹಾಗೂ ಸಂಬಂಧಪಟ್ಟ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img