ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಪ್ರಕಲ್ಪ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಆತ್ಮವಿಶ್ವಾಸ, ಚಿಂತನಾ ಶಕ್ತಿ ಹಾಗೂ ಭಾಷಾ ಕೌಶಲ್ಯವನ್ನು ಬೆಳೆಸುವ ಉದ್ದೇಶದಿಂದ ವಾದ-ಪ್ರತಿವಾದ ಸ್ಪರ್ಧೆ ಆಯೋಜಿಸಲಾಯಿತು.
ಒಂದನೇ ತರಗತಿಯಿಂದ ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ವಿಚಾರಗಳನ್ನು ಸ್ಪಷ್ಟವಾಗಿ ಮಂಡಿಸುವ ಮೂಲಕ ಪ್ರತಿಭೆಯನ್ನು ಅನಾವರಣಗೊಳಿಸಿದರು.
‘ಬಾಲಕಿಯರಿಗೆ ಹೆಚ್ಚಿನ ಸೌಲಭ್ಯವೇ? ಅಥವಾ ಬಾಲಕರಿಗೆ?’ ಎಂಬ ವಿಷಯದ ಕುರಿತು ನಡೆದ ವಾದ-ಪ್ರತಿವಾದ ಸ್ಪರ್ಧೆ ವಿದ್ಯಾರ್ಥಿಗಳಲ್ಲಿ ಉತ್ತಮ ಚರ್ಚೆಗೆ ವೇದಿಕೆಯಾಯಿತು.
ಈ ಸಂದರ್ಭದಲ್ಲಿ ಸಂಸ್ಥಾಪಕ ಹಾಗೂ ಅಧ್ಯಕ್ಷ ಎಸ್.ಬಿ. ಹುಬ್ಬಳ್ಳಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿಶಿಷ್ಟ ಪ್ರತಿಭೆ ಅಡಗಿದ್ದು, ಇಂತಹ ಸ್ಪರ್ಧೆಗಳು ಅವರ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ-ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಹಾಗೂ ಕಾರ್ಯಕ್ರಮ ಯಶಸ್ವಿಗೊಳಿಸಿದ ಶಿಕ್ಷಕರನ್ನು ಅಭಿನಂದಿಸಲಾಯಿತು.



