ಮಂಗಳೂರು: ಕರಾವಳಿ ಭಾಗದಾದ್ಯಂತ ಶುಕ್ರವಾರ ಈದುಲ್ ಫಿತ್ರ್ ಹಬ್ಬವನ್ನು ಆಚರಿಸುವಂತೆ ದಕ್ಷಿಣ ಕನ್ನಡ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಕರೆ ನೀಡಿದ್ದಾರೆ.
ಶವ್ವಾಲ್ ಮಾಸದ ಪ್ರಥಮ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ನಾಳೆ ಈದ್ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಧಿಕೃತವಾಗಿ ಘೋಷಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಮುಸ್ಲಿಂ ಸಮುದಾಯದವರು ರಮಝಾನ್ ಉಪವಾಸವನ್ನು ಕಟ್ಟುನಿಟ್ಟಾಗಿ ಆಚರಿಸಿದ್ದರು. ಇಂದು ಚಂದ್ರದರ್ಶನವಾದ ಹಿನ್ನೆಲೆ ಉಪವಾಸ ವ್ರತಕ್ಕೆ ತೆರೆ ಬಿದ್ದು, ನಾಳೆ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳ ಮೂಲಕ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಾದ್ಯಂತ ಈದ್ ಹಬ್ಬದ ಸಂಭ್ರಮ ಈಗಲೇ ಕಳೆಗಟ್ಟಿದೆ.



