HomeSports Newsಭಾರತ ಅಂಡರ್‌-19 ತಂಡದ ಮಾಜಿ ಆಟಗಾರ ಶ್ರೀಲಂಕಾದಲ್ಲಿ ಬಂಧನ! ಯಾಕೆ ಗೊತ್ತಾ..?

ಭಾರತ ಅಂಡರ್‌-19 ತಂಡದ ಮಾಜಿ ಆಟಗಾರ ಶ್ರೀಲಂಕಾದಲ್ಲಿ ಬಂಧನ! ಯಾಕೆ ಗೊತ್ತಾ..?

For Dai;y Updates Join Our whatsapp Group

ಕೊಲಂಬೊ: ಲಂಕಾ ಪ್ರೀಮಿಯರ್ ಲೀಗ್‌ (ಎಲ್‌ಪಿಎಲ್) ವೇಳೆ ಆಟಗಾರನೊಬ್ಬನಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ ಭಾರತದ ಮಾಜಿ ಅಂಡರ್-19 ವಿಶ್ವಕಪ್ ವಿಜೇತ ಕ್ರಿಕೆಟಿಗ ಮಂಜೋತ್ ಕಲ್ರಾ ಅವರನ್ನು ಶ್ರೀಲಂಕಾದ ಕ್ರೀಡಾ ಭ್ರಷ್ಟಾಚಾರ ವಿರೋಧಿ ತನಿಖಾಧಿಕಾರಿಗಳು ಬಂಧಿಸಿದ್ದಾರೆ.

ಕ್ರೀಡೆಗೆ ಸಂಬಂಧಿಸಿದ ಅಪರಾಧಗಳ ತನಿಖೆ ನಡೆಸುತ್ತಿರುವ ಶ್ರೀಲಂಕಾ ಪೊಲೀಸ್ ವಿಶೇಷ ತನಿಖಾ ಘಟಕವು ಶುಕ್ರವಾರ ಕಲ್ರಾ ಅವರನ್ನು ವಶಕ್ಕೆ ಪಡೆದಿದೆ. ಬಳಿಕ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ.

2018ರ ಐಸಿಸಿ ಅಂಡರ್-19 ವಿಶ್ವಕಪ್‌ನಲ್ಲಿ ಭಾರತದ ಗೆಲುವಿನ ಪ್ರಮುಖ ಪಾತ್ರ ವಹಿಸಿದ್ದ ಮಂಜೋತ್ ಕಲ್ರಾ, ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಜೇಯ 101 ರನ್‌ಗಳ ಭರ್ಜರಿ ಶತಕ ಸಿಡಿಸಿ ಪಂದ್ಯದ ಹೀರೋ ಆಗಿದ್ದರು. ಪೃಥ್ವಿ ಶಾ ನಾಯಕತ್ವದ ಭಾರತ ತಂಡ ಆ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ವಿಶ್ವಕಪ್ ಪ್ರಶಸ್ತಿ ಗೆದ್ದಿತ್ತು.

ಆ ತಂಡದಲ್ಲಿ ಪ್ರಸ್ತುತ ಭಾರತ ತಂಡದ ಪ್ರಮುಖ ಆಟಗಾರರಾಗಿರುವ ಶುಭ್‌ಮನ್ ಗಿಲ್, ಅರ್ಷದೀಪ್ ಸಿಂಗ್ ಮತ್ತು ಶಿವಂ ಮಾವಿ ಕೂಡ ಇದ್ದರು.

ಲಂಕಾ ಪ್ರೀಮಿಯರ್ ಲೀಗ್‌ಗೆ ಸಂಬಂಧಿಸಿದಂತೆ ಆಟಗಾರನೊಬ್ಬನಿಗೆ ಹಣದ ಆಮಿಷ ಒಡ್ಡಲು ಕಲ್ರಾ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ ಎಂದು ಶ್ರೀಲಂಕಾ ಪೊಲೀಸರು ತಿಳಿಸಿದ್ದಾರೆ. ಪಂದ್ಯಾವಳಿ ಆರಂಭವಾಗುವ ಕೆಲವೇ ಗಂಟೆಗಳ ಮುನ್ನವೇ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಮಂಜೋತ್ ಕಲ್ರಾ ಜಾಫ್ನಾ ಕಿಂಗ್ಸ್ ಫ್ರಾಂಚೈಸಿಯ ಸಹ-ಮಾಲೀಕರಲ್ಲಿ ಒಬ್ಬರಾಗಿದ್ದಾರೆ. ಪ್ರಕರಣದ ಕುರಿತು ಶ್ರೀಲಂಕಾ ಕ್ರೀಡಾ ಭ್ರಷ್ಟಾಚಾರ ವಿರೋಧಿ ತನಿಖಾಧಿಕಾರಿಗಳು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img