HomeKarnataka Newsಜೆಡಿಎಸ್ ಪಕ್ಷದ ಚಿಟಗುಪ್ಪಾ ತಾಲೂಕು ಅಧ್ಯಕ್ಷರಿಗೆ ನೇಮಕಾತಿ ಪತ್ರ ವಿತರಿಸಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಜೆಡಿಎಸ್ ಪಕ್ಷದ ಚಿಟಗುಪ್ಪಾ ತಾಲೂಕು ಅಧ್ಯಕ್ಷರಿಗೆ ನೇಮಕಾತಿ ಪತ್ರ ವಿತರಿಸಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

For Dai;y Updates Join Our whatsapp Group

ಬೀದರ್: ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಜನತಾದಳ (ಜಾತ್ಯಾತೀತ) ಪಕ್ಷದ ನೂತನ ತಾಲೂಕು ಅಧ್ಯಕ್ಷರಾಗಿ ಸೈಯದ್ ಫರಮಾನ ಉಲ್ ಹಕ್ ಬುಕಾರಿ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಸಚಿವರು ಹಾಗೂ ಜೆಡಿಎಸ್ ಹಿರಿಯ ನಾಯಕ ಬಂಡೆಪ್ಪ ಖಾಶೆಂಪುರ್ ಅವರು ನೇಮಕಾತಿ ಆದೇಶ ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ಬೀದರ್ ನಗರದ ಓಲ್ಡ್ ಸಿಟಿಯಲ್ಲಿರುವ ಬಂಡೆಪ್ಪ ಖಾಶೆಂಪುರ್ ಅವರ ನಿವಾಸದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲ್ಪೂರ್ ಅವರು ಹೊರಡಿಸಿದ್ದ ನೇಮಕಾತಿ ಆದೇಶ ಪತ್ರವನ್ನು ಬಂಡೆಪ್ಪ ಖಾಶೆಂಪುರ್ ಅವರು ಸೈಯದ್ ಫರಮಾನ ಉಲ್ ಹಕ್ ಬುಕಾರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಂಡೆಪ್ಪ ಖಾಶೆಂಪುರ್, ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿ ಮತ್ತಷ್ಟು ಬಲಿಷ್ಠಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದು ಹೇಳಿದರು. ನೂತನ ತಾಲೂಕು ಅಧ್ಯಕ್ಷರಾಗಿ ನೇಮಕಗೊಂಡಿರುವ ಸೈಯದ್ ಫರಮಾನ ಉಲ್ ಹಕ್ ಬುಕಾರಿ ಅವರು ತಾಲೂಕಿನ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂದು ಅವರು ಕರೆ ನೀಡಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲ್ಪೂರ್ ಅವರು ಹೊರಡಿಸಿರುವ ನೇಮಕಾತಿ ಆದೇಶದಲ್ಲಿ, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷವನ್ನು ಬೇರುಮಟ್ಟದಿಂದ ಪರಿಣಾಮಕಾರಿಯಾಗಿ ಸಂಘಟಿಸುವ ಉದ್ದೇಶದಿಂದ ಸೈಯದ್ ಫರಮಾನ ಉಲ್ ಹಕ್ ಬುಕಾರಿ ಅವರನ್ನು ಕೂಡಲೇ ಜಾರಿಗೆ ಬರುವಂತೆ ಚಿಟಗುಪ್ಪಾ ತಾಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ತಾಲೂಕಿನಲ್ಲಿ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ವಿಶ್ವಾಸವನ್ನು ವ್ಯಕ್ತಪಡಿಸಿ ಶುಭಾಶಯ ಕೋರಲಾಗಿದೆ.

ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲ್ಪೂರ್, ಪಕ್ಷದ ಮುಖಂಡರಾದ ಅಶೋಕ್ ಕೊಡಗೆ, ಸಜ್ಜದ್ ಸಾಹೇಬ್, ಶಾಂತಲಿಂಗ ಸಾವಳಗಿ, ಬಸವರಾಜ್ ಪಾಟೀಲ್ ಹಾರೂರಗೇರಿ, ಸಂತೋಷ್ ರಾಸೂರೆ, ಲಲಿತಾ ಕರಂಜೆ, ಜಾಪೇಡ್ ಕಡ್ಯಾಳ, ಅಬೀದ್ ಅಲಿ, ನಿಜಾಮ್ ಹಕೀಮ್, ಲೈಖ್ ಬಾರೋದ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img