HomeGadag Newsಹಾಲಕೆರೆ ಬೆಳ್ಳಿ ರಥೋತ್ಸವ ಸಂಪನ್ನ

ಹಾಲಕೆರೆ ಬೆಳ್ಳಿ ರಥೋತ್ಸವ ಸಂಪನ್ನ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಹಾಲಕೆರೆ ಗ್ರಾಮದ ಶ್ರೀ ಅನ್ನದಾನೇಶ್ವರ ಸಂಸ್ಥಾನಮಠದ ಲಿಂ. ಗುರು ಅನ್ನದಾನ ಸ್ವಾಮಿಗಳ 48ನೇ ಪುಣ್ಯಸ್ಮರಣೋತ್ಸವ, ಉಡಿ ತುಂಬುವ ಸಮಾರಂಭ, `ಮರಳಿ ಮಣ್ಣಿಗೆ’ ಜನಜಾಗೃತಿ ಕಾರ್ಯಕ್ರಮ ಹಾಗೂ ಬೆಳ್ಳಿ ರಥೋತ್ಸವ ಕಾರ್ಯಕ್ರಮವು ಸೋಮವಾರ ಸಂಜೆ ವೈಭವಯುತವಾಗಿ ನೆರವೇರಿತು.

ಹಾಲಕೆರೆ ಕ್ಷೇತ್ರಕ್ಕೆ ಆಗಮಿಸಿದ್ದ ಎಲ್ಲ ಹರ-ಗುರು-ಚರ ಮೂರ್ತಿಗಳು ಹಾಗೂ ಹಾಲಕೆರೆ ಸಂಸ್ಥಾನ ಮಠದ ಪೀಠಾಧೀಪತಿ ಮುಪ್ಪಿನ ಬಸವಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಬೆಳ್ಳಿ ರಥೋತ್ಸವಕ್ಕೆ ಪೂಜೆ ಸಲ್ಲಿಸಿದರು. ನಂತರ ಸಂಜೆ 6ಕ್ಕೆ ಮಹಿಳೆಯರು, ವಿದ್ಯಾರ್ಥಿನಿಯರು ಜಯಘೋಷಗಳನ್ನು ಕೂಗುತ್ತ ಬೆಳ್ಳಿ ತೇರನ್ನು ಎಳೆದು ಸಂಭ್ರಮಿಸಿದರು.

ರಥವು ಯಶಸ್ವಿಯಾಗಿ ಮರಳಿ ಸ್ವಸ್ಥಳಕ್ಕೆ ಬಂದು ನಿಂತಾಗ ಚಪ್ಪಾಳೆ ತಟ್ಟಿದ ಭಕ್ತರು ಭಕ್ತಿಭಾವ ಮೆರೆದರು. ಮಹಿಳೆಯರು ಭಕ್ತಿ, ಶ್ರದ್ಧೆಯಿಂದ ತೇರಿಗೆ ಪುಷ್ಪ ಎರಚುವ ಮೂಲಕ ಸಂಭ್ರಮದಿಂದ ತಮ್ಮ ಭಕ್ತಿಯನ್ನು ಸಮರ್ಪಿಸಿದರು. ಗದಗ, ಧಾರವಾಡ, ಕೊಪ್ಪಳ, ಬಾಗಲಕೋಟ, ವಿಜಯನಗರ, ಬಳ್ಳಾರಿ, ರಾಯಚೂರು, ದಾವಣಗೇರಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img