HomeBengaluru Newsಕಳ್ಳತನದ ಕೇಸಲ್ಲಿ ತಲೆಮರೆಸಿಕೊಂಡಿದ್ದ ಹಾಸನದ ದೇವೇಗೌಡ ಕೊನೆಗೂ ಅಂದರ್..!

ಕಳ್ಳತನದ ಕೇಸಲ್ಲಿ ತಲೆಮರೆಸಿಕೊಂಡಿದ್ದ ಹಾಸನದ ದೇವೇಗೌಡ ಕೊನೆಗೂ ಅಂದರ್..!

For Dai;y Updates Join Our whatsapp Group

ಬೆಂಗಳೂರು: ಕಳ್ಳತನದ ಕೇಸಲ್ಲಿ ತಲೆಮರೆಸಿಕೊಂಡಿದ್ದ ಹಾಸನದ ದೇವೇಗೌಡ 26 ವರ್ಷಗಳ‌ ಬಳಿಕ ಕೊನೆಗೂ ಅಂದರ್ ಆಗಿದ್ದಾನೆ. 1997 ರಲ್ಲಿ ಈತನ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು.

ಮೂಲತಃ ಹಾಸನದ ಆಲೂರಿನವನಾದ ದೇವೇಗೌಡ ಆರೋಪಿಯಾಗಿದ್ದು, ದೇವೇಗೌಡನನ್ನು ಕೋರ್ಟ್ ಗೆ ಹಾಜರುಪಡಿಸಿ ಅಂತಾ ಅನೇಕ ಬಾರಿ ಕೋರ್ಟ್ ವಾರೆಂಟ್ ಜಾರಿಗೊಳಿಸಿತ್ತು.

ಆದ್ದರಿಂದ ಹಾಸನ, ಬೆಂಗಳೂರಿನಲ್ಲಿ ದೇವೇಗೌಡನಿಗಾಗಿ ಪೊಲೀಸರು ತಲಾಶ್ ನಡೆಸಿದ್ದರು. ಆದರೆ ವಾರೆಂಟ್ ಜಾರಿಯಾದ ಕೋರ್ಟ್ ಆವರಣದಲ್ಲೇ ಆರೋಪಿ ಕೆಲಸ ಮಾಡುತ್ತಿದ್ದ.

ಕೊನೆಗೆ ಸೆಷನ್ ಕೋರ್ಟ್ ಆವರಣದಲ್ಲೇ ಲಾಕ್ ಆಗಿದ್ದಾನೆ. 26 ವರ್ಷಗಳಿಂದ ಕಳ್ಳತನ ಕೇಸಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಸದ್ಯ ಈತನನ್ನು ಬಂಧಿಸಿ ಕೋರ್ಟ್ ಗೆ ಕಾಮಾಕ್ಷಿಪಾಳ್ಯ ಪೊಲೀಸರು ಹಾಜರು ಪಡಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img