ತುಮಕೂರು: ಗುಬ್ಬಿ ತಾಲ್ಲೂಕಿನ ಹಾಳಗಲವಾಡಿಯಲ್ಲಿ ಎರಡು ವರ್ಷದ ಮಗುವಿನ ಜೊತೆ ತಾಯಿ ಒಂದೇ ಕುಣಿಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ.
ಗಂಗಾಮಣಿ(30), ಪ್ರೇಕ್ಷಾ (2) ಮೃತರು. ಗಂಗಾಮಣಿ ತನ್ನೊಟ್ಟಿಗೆ ಏನು ಅರಿಯದ 2 ವರ್ಷದ ಮಗುವಿನ ಕುತ್ತಿಗೆಗೆ ಕುಣಿಕೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಎಂಟು ವರ್ಷದ ಹಿಂದೆ ಯತೀಶ್ ಎಂಬಾತನ ಜೊತೆ ಗಂಗಾಮಣಿ ವಿವಾಹವಾಗಿದ್ದು, ದಂಪತಿಗೆ ಮೂರು ಮಕ್ಕಳು ಇದ್ದಾರೆ. ಇನ್ನು ಇಬ್ಬರು ಮಕ್ಕಳು ವಿನಯ್ (7) ಮತ್ತು ರಕ್ಷಿತಾ (5) ಶಾಲೆಗೆ ಹೋಗಿದ್ದರಿಂದ ಸಾವಿನಿಂದ ಪಾರಾಗಿದ್ದಾರೆ.
ಇನ್ನು ಮಕ್ಕಳು ಶಾಲೆಯಿಂದ ಮನೆಗೆ ಬಂದಿದ್ದಾರೆ. ಆದ್ರೆ, ಮನೆ ಒಳಗಿನಿಂದ ಲಾಕ್ ಆಗಿದ್ದು, ಇದನ್ನು ಅಕ್ಕಪಕ್ಕದ ಮನೆಯವರಿಗೆ ತಿಳಿಸಿದ್ದಾರೆ. ಬಳಿಕ ಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



