Homekoppalನಾನೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ: ಬಸವರಾಜ ರಾಯರಡ್ಡಿ

ನಾನೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ: ಬಸವರಾಜ ರಾಯರಡ್ಡಿ

For Dai;y Updates Join Our whatsapp Group

ವಿಜಯಸಾಕ್ಷಿ, ಕೊಪ್ಪಳ : ರಾಜ್ಯದಲ್ಲಿ ಮುಖ್ಯಮಂತ್ರಿ ಆಗಬೇಕು ಎಂದು ಕೆಲವರು ಆಸೆ ಪಡುತ್ತಿದ್ದಾರೆ. ಆ ಹುದ್ದೆ ಖಾಲಿಯಿಲ್ಲ. ಆದರೆ ಬೇರೆಯವರಿಗೆ ಸಿ.ಎಂ. ಸ್ಥಾನ ಕೊಡುವುದಾದರೆ ನಾನೂ ಆಕಾಂಕ್ಷಿ ಎಂದು ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗಕ್ಕೆ ಸಿ.ಎಂ. ಸ್ಥಾನ ಕೊಡುವುದಾದರೆ ನಾನೇ ಮುಂಚೂಣಿಯಲ್ಲಿರುವೆ ಎಂದರು.

ಸಿದ್ದರಾಮಯ್ಯ ಮುಂದಿನ ಮೂರೂವರೆ ವರ್ಷ ಸಿ.ಎಂ. ಆಗಿರಬೇಕು. ಆಗಮಾತ್ರ ರಾಜ್ಯ ಅಭಿವೃದ್ಧಿ ಆಗುತ್ತದೆ. ಅವರೇ ಮುಂದುವರೆಯಬೇಕು ಅಂತ ನಮ್ಮ ಆಸೆಯಿದೆ ಎಂದರು. ಸಿದ್ದರಾಮಯ್ಯ ತಮ್ಮ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂದು ನಿಮಗೆ ಹೇಳಿದವರು ಯಾರು ಎಂದು ಪ್ರಶ್ನಿಸಿದರು.

ಆ‌ರ್.ವಿ. ದೇಶಪಾಂಡೆ ಮುಖ್ಯಮಂತ್ರಿ ಸ್ಥಾನ ಕುರಿತು ನೀಡಿದ ಹೇಳಿಕೆಯಲ್ಲಿ ತಪ್ಪೇನೂ ಇಲ್ಲ. ನಾನು ಕೂಡ ಲಿಂಗಾಯತ ನಾಯಕ. ಬಿ.ಆರ್. ಪಾಟೀಲ ಹಾಗೂ ನಾನು ಹಿರಿಯರಿದ್ದೇವೆ. ನಾನು ಸಿಎಂ ಯಾಕೆ ಆಗಬಾರದು, ನಮ್ಮ ಪಕ್ಷ ಲಿಂಗಾಯತ ಸಮುದಾಯಕ್ಕೆ ಕೊಡುವುದಾದರೆ ನನಗೆ ಸ್ಥಾನ ನೀಡಲಿ ಎಂದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img