HomeBengaluru NewsIndependence Day 2026: ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ!

Independence Day 2026: ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ!

For Dai;y Updates Join Our whatsapp Group

ಬೆಂಗಳೂರು: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಮುಖ್ಯಮಂತ್ರಿಯಾಗಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ವಿಶೇಷ ಕ್ಷಣಕ್ಕೆ ಸಾವಿರಾರು ಜನರು ಸಾಕ್ಷಿಯಾದರು.

ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಸಿಎಂ, ತ್ರಿವರ್ಣ ಧ್ವಜಕ್ಕೆ ಗೌರವ ಸಲ್ಲಿಸಿದರು. ಧ್ವಜಾರೋಹಣದ ತಕ್ಷಣ ವಂದೇ ಮಾತರಂ ಗೀತೆ ಮೊಳಗಿದರೆ, ಬಳಿಕ ಪೊಲೀಸ್ ಬ್ಯಾಂಡ್ ರಾಷ್ಟ್ರಗೀತೆಯನ್ನು ಪ್ರಸ್ತುತಪಡಿಸಿತು.

ತೆರೆದ ಜೀಪಿನಲ್ಲಿ ಗೌರವ ವಂದನೆ ಸ್ವೀಕರಿಸಿದ ಸಿಎಂ:

ಧ್ವಜಾರೋಹಣದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೆರೆದ ಜೀಪಿನಲ್ಲಿ ಪಥಸಂಚಲನ ಪರಿಶೀಲಿಸಿ ಪೊಲೀಸ್, ಸಶಸ್ತ್ರ ಪಡೆ ಹಾಗೂ ವಿವಿಧ ತಂಡಗಳಿಂದ ಸಲ್ಲಿಸಲಾದ ಗೌರವ ವಂದನೆಯನ್ನು ಸ್ವೀಕರಿಸಿದರು. ಈ ಬಾರಿ ರಾಜ್ಯ ಸರ್ಕಾರ ಸಾರ್ವಜನಿಕರಿಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಿತ್ತು.

ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಂಭ್ರಮ:

ಸಿಎಂ ಭಾಷಣದ ಬಳಿಕ ಮಾಣೆಕ್ ಷಾ ಮೈದಾನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು ಮತ್ತು ವಿವಿಧ ಕಲಾ ತಂಡಗಳು ದೇಶಭಕ್ತಿ ಗೀತೆಗಳು ಹಾಗೂ ನೃತ್ಯ ಪ್ರದರ್ಶನಗಳ ಮೂಲಕ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದವು.

ಇದೇ ವೇಳೆ, ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸತತ 13ನೇ ಬಾರಿಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಕರ್ನಾಟಕದಲ್ಲೂ ರಾಜ್ಯಮಟ್ಟದ ಆಚರಣೆಯ ಮೂಲಕ 80ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img