ಬೇಸಿಗೆ ಹಿಮ್ಮುಖವಾಗಿ ತಂಪಾದ ನೀರು ಕುಡಿಯುವುದು ಸಾಮಾನ್ಯ ಅಭ್ಯಾಸವಾಗಿದ್ದರೂ, ಇದರಿಂದ ಕೆಲವು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.
ಬಿಸಿಲಿನ ತೀವ್ರತೆಯಿಂದ ಮುಕ್ತಿ ಪಡೆಯಲು ತಕ್ಷಣ ತಂಪು ನೀರನ್ನು ಕುಡಿಯುವ ಅಭ್ಯಾಸ ದೇಹದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರುತ್ತದೆ.
ತಜ್ಞರ ಪ್ರಕಾರ, ತುಂಬಾ ತಂಪಾದ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರಬಹುದು. ಆಹಾರ ಸರಿಯಾಗಿ ಜೀರ್ಣವಾಗದೇ ಹೊಟ್ಟೆ ಭಾರವಾಗುವುದು, ಗ್ಯಾಸ್ಟ್ರಿಕ್ ಸಮಸ್ಯೆಗಳು ಕಂಡುಬರಬಹುದು. ಜೊತೆಗೆ ಗಂಟಲು ಕೆರೆತ ಅಥವಾ ಶೀತಕ್ಕೆ ಒಳಗಾಗಬಹುದು. ಬೇಸಿಗೆಯಲ್ಲಿ ದೇಹ ಬಿಸಿಯಾಗಿರುವ ಸಮಯದಲ್ಲಿ ಏಕಾಏಕಿ ತಣ್ಣೀರು ಕುಡಿಯುವುದರಿಂದ ದೇಹದ ತಾಪಮಾನ ಏಕಾಏಕಿ ಬದಲಾವಣೆಯಾಗುತ್ತದೆ. ಇದರಿಂದ ತಲೆನೋವು, ಸುಸ್ತು, ರಕ್ತ ಸಂಚಾರದ ಮೇಲೆ ಪರಿಣಾಮ, ದೀರ್ಘಕಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ.
ಯಾರು ತಣ್ಣೀರು ಕುಡಿಯಬಾರದು?
- ಜೀರ್ಣಕ್ರಿಯೆ ಸಮಸ್ಯೆಯಿರುವವರು
- ಗಂಟಲು ಅಥವಾ ಸೈನಸ್ ಸಮಸ್ಯೆ ಹೊಂದಿರುವವರು
- ಹೆಚ್ಚು ಶೀತಕ್ಕೆ ಒಳಗಾಗುವವರು
- ಸಣ್ಣ ಮಕ್ಕಳು ಮತ್ತು ವೃದ್ಧರು
- ಹೃದಯ ಅಥವಾ ರಕ್ತದ ಒತ್ತಡ ಸಮಸ್ಯೆ ಇರುವವರು
ತಣ್ಣೀರು ಕುಡಿಯುವ ಮುನ್ನ ಪಾಲಿಸಬೇಕಾದ ಮುನ್ನೆಚ್ಚರಿಕೆಗಳು:
- ತುಂಬಾ ಐಸ್ ಅಥವಾ ಅತಿಯಾಗಿ ತಂಪಾದ ನೀರನ್ನು ಕುಡಿಯಬೇಡಿ
- ಬಿಸಿಲಿನಿಂದ ಬಂದ ತಕ್ಷಣ ನೀರು ಕುಡಿಯದೆ, ಕೆಲವು ನಿಮಿಷ ವಿಶ್ರಾಂತಿ ತೆಗೆದುಕೊಳ್ಳಿ
- ದಿನವಿಡೀ ನೀರನ್ನು ಸ್ವಲ್ಪ-ಸ್ವಲ್ಪ ಕುಡಿಯಿರಿ
- ಗಂಟಲು ನೋವು ಅಥವಾ ಇತರ ಸಮಸ್ಯೆಗಳಿದ್ದರೆ ತಣ್ಣೀರು ಕುಡಿಯಬೇಡಿ



