HomeKarnataka Newsಕರ್ನಾಟಕದ ಜಲಾಶಯಗಳಿಗೆ ಜೀವಕಳೆ; ಹೇಮಾವತಿ ಸೇರಿ ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ ಏರಿಕೆ

ಕರ್ನಾಟಕದ ಜಲಾಶಯಗಳಿಗೆ ಜೀವಕಳೆ; ಹೇಮಾವತಿ ಸೇರಿ ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ ಏರಿಕೆ

For Dai;y Updates Join Our whatsapp Group

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಸುರಿದ ಮಳೆಯಿಂದ ಪ್ರಮುಖ ಜಲಾಶಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ರೈತರು ಹಾಗೂ ಜನರಲ್ಲಿ ಸಂತಸ ಮೂಡಿದೆ.

ಬರಗಾಲದ ಆತಂಕದಲ್ಲಿದ್ದ ಹಾಸನ ಜಿಲ್ಲೆಯ ಗೊರೂರು ಹೇಮಾವತಿ ಜಲಾಶಯಕ್ಕೆ ಕಳೆದ ಒಂದೂವರೆ ತಿಂಗಳಲ್ಲಿ ಬರೋಬ್ಬರಿ 11 ಟಿಎಂಸಿ ನೀರು ಹರಿದು ಬಂದಿದೆ. ಜೂನ್ ಆರಂಭಕ್ಕೆ ಹೋಲಿಸಿದರೆ ಜಲಾಶಯದ ನೀರಿನ ಮಟ್ಟ ಸುಮಾರು 19 ಅಡಿಗಳಷ್ಟು ಏರಿಕೆಯಾಗಿದೆ.

ಕಬಿನಿ ಜಲಾಶಯದಲ್ಲಿ ಒಳಹರಿವು ಹೆಚ್ಚಳ:

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೂ ಒಳಹರಿವು ಹೆಚ್ಚಾಗಿದೆ.

ಪ್ರಸ್ತುತ ಜಲಾಶಯದ ನೀರಿನ ಮಟ್ಟ 80.08 ಅಡಿ ಇದ್ದು, ಒಟ್ಟು 17.09 ಟಿಎಂಸಿ ನೀರು ಸಂಗ್ರಹವಾಗಿದೆ. ಬಳಕೆಗೆ ಲಭ್ಯವಿರುವ ನೀರಿನ ಪ್ರಮಾಣ 7.28 ಟಿಎಂಸಿ ಇದೆ.

ಜಲಾಶಯಕ್ಕೆ 11,747 ಕ್ಯೂಸೆಕ್ ಒಳಹರಿವು ಇದ್ದು, ನದಿಗೆ 500 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಕಬಿನಿ ಜಲಾಶಯ ವ್ಯಾಪ್ತಿಯಲ್ಲಿ 60 ಮಿ.ಮೀ ಮಳೆಯಾಗಿದೆ.

ಆಲಮಟ್ಟಿ ಜಲಾಶಯ ಭರ್ತಿ ಹಂತಕ್ಕೆ:

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಕೃಷ್ಣಾ ನದಿಗೆ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯ ಕೂಡ ಭರ್ತಿ ಹಂತ ತಲುಪಿದೆ.

ಜಲಾಶಯದ ಗರಿಷ್ಠ ಮಟ್ಟ 519.60 ಮೀಟರ್ ಇದ್ದು, ಸದ್ಯ ನೀರಿನ ಮಟ್ಟ 519.00 ಮೀಟರ್ ಇದೆ.

ಆಲಮಟ್ಟಿ ಜಲಾಶಯಕ್ಕೆ 92,500 ಕ್ಯೂಸೆಕ್ ಒಳಹರಿವು ಇದ್ದು, ನದಿಗೆ 1,11,308 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.

ತುಂಗಾ ಡ್ಯಾಂ ಸಂಪೂರ್ಣ ಭರ್ತಿ:

ಮಲೆನಾಡು ಭಾಗದಲ್ಲಿ ಸುರಿದ ಭಾರೀ ಮಳೆಯಿಂದ ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ಡ್ಯಾಂನ 22 ಕ್ರಸ್ಟ್ ಗೇಟ್‌ಗಳನ್ನು ತೆರೆಯಲಾಗಿದ್ದು, 55,000 ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಹರಿಬಿಡಲಾಗಿದೆ.

ತುಂಗಾ ಡ್ಯಾಂ ಭರ್ತಿಯಾಗಿರುವುದು ಶಿವಮೊಗ್ಗ ಸೇರಿದಂತೆ ದಾವಣಗೆರೆ, ಬಳ್ಳಾರಿ, ಹಾವೇರಿ ಹಾಗೂ ಗದಗ ಜಿಲ್ಲೆಯ ರೈತರಿಗೆ ದೊಡ್ಡ ಮಟ್ಟದ ನೆಮ್ಮದಿ ತಂದಿದೆ.

ಹೇಮಾವತಿ ಜಲಾಶಯದಲ್ಲಿ ನೀರಿನ ಸಂಗ್ರಹ ಏರಿಕೆ:

ಗೊರೂರು ಹೇಮಾವತಿ ಜಲಾಶಯಕ್ಕೆ ಸದ್ಯ 11,686 ಕ್ಯೂಸೆಕ್ ಒಳಹರಿವು ದಾಖಲಾಗಿದೆ.

ಜಲಾಶಯದ ನೀರಿನ ಮಟ್ಟ 2,890 ಅಡಿಯಿಂದ 2,909 ಅಡಿಗೆ ಏರಿಕೆಯಾಗಿದೆ. ಒಟ್ಟು 37 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 25.986 ಟಿಎಂಸಿ ನೀರು ಸಂಗ್ರಹವಾಗಿದ್ದು, ಶೇ.65ರಷ್ಟು ಭರ್ತಿಯಾಗಿದೆ.

ಒಟ್ಟಾರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರಿನ ನಿರ್ವಹಣೆಗೆ ಅನುಕೂಲವಾಗುವ ನಿರೀಕ್ಷೆ ಮೂಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img