HomeGadag Newsಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ತಾಳ್ಮೆಯ ಪ್ರತಿರೂಪ: ಡಾ. ಕಲ್ಲಯ್ಯಜ್ಜ

ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ತಾಳ್ಮೆಯ ಪ್ರತಿರೂಪ: ಡಾ. ಕಲ್ಲಯ್ಯಜ್ಜ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಾಕಷ್ಟು ಕಷ್ಟ ಬಂದರೂ ಧೃತಿಗೆಡದೇ ಕಠೋರ ತಪಸ್ಸು ಮಾಡುವ ಮೂಲಕ ಶಿವನೊಲುಮೆಯನ್ನು ಪಡೆದು ಸಮಾಜದ ಉದ್ಧಾರಕ್ಕಾಗಿ ಬಾಳಿ ಬದುಕಿ ಇಡೀ ಮಾನವ ಕುಲಕ್ಕೆ ಮತ್ತು ಸರ್ವ ಸಮಾಜದ ಮಹಿಳೆಯರಿಗೆ ಮಾದರಿಯಾಗಿದ್ದಾಳೆ ಎಂದು ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪೂಜ್ಯ ಡಾ. ಕಲ್ಲಯ್ಯಜ್ಜನವರು ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ವೀರೇಶ್ವರ ಪುಣ್ಯಾಶ್ರಮದಲ್ಲಿ ಗದಗ ಜಿಲ್ಲಾ ಶಿವಶರಣೆ ಹೇಮರಡ್ಡಿ ಮಲ್ಲಮ್ಮ, ಶ್ರೀ ಮಹಾಯೋಗಿ ವೇಮನ ರಡ್ಡಿ ಸಮಾಜ ಸಂಘದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಕಾರ್ತಿಕ ಮಾಸದ ದೀಪೋತ್ಸವವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ದಯಪಾಲಿಸಿದರು.

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಮಾಜಕ್ಕೆ ಅಗಾಧವಾದ ಕೊಡುಗೆ ನೀಡಿದ್ದಾರೆ. ಅದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಮಲ್ಲಮ್ಮನ ಕಾಯಕನಿಷ್ಠೆ, ದೈವಭಕ್ತಿ ಮತ್ತು ಆದರ್ಶಮಯ ಜೀವನದ ಬಲದಿಂದ ಇಂದು ನಾವು ನೀವೆಲ್ಲರೂ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದೇವೆ ಎಂದರು.

ಮಹಾಯೋಗಿ ವೇಮನ ಅವರು ತ್ಯಾಗ ಜೀವನ ನಡೆಸುವ ಮೂಲಕ ಹಾಗೂ ವಚನ ಸಾಹಿತ್ಯಕ್ಕೆ ಬಹು ದೊಡ್ಡ ಆದರ್ಶದ ಕೊಡುಗೆಯನ್ನು ನೀಡುವ ಮೂಲಕ ಸಮಾಜದ ಸನ್ಮಾರ್ಗಕ್ಕೆ ಕಾರಣರಾಗಿದ್ದಾರೆ ಎಂದು ಬಣ್ಣಿಸಿದರು.

ಗದಗ ಜಿಲ್ಲಾ ಶಿವಶರಣೆ ಹೇಮರಡ್ಡಿ ಮಲ್ಲಮ್ಮ, ಶ್ರೀ ಮಹಾಯೋಗಿ ವೇಮನ ರಡ್ಡಿ ಸಂಘ ಸಮಾಜಮುಖಿ, ಜನಮುಖಿಯಾಗಿ ಒಳ್ಳೆಯ ಕಾರ್ಯ ಮಾಡುತ್ತಿದೆ ಎಂದರಲ್ಲದೆ, ಸಮಾಜದ ಮುಂಚೂಣಿಯಲ್ಲಿರುವ ಹಿರಿಯರು, ಮಹಿಳೆಯರು, ಯುವಕರು ಸಮಾಜದ ಬಲವರ್ಧನೆಗೆ ಶ್ರಮಿಸುತ್ತಿರುವದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಎರಡೂ ಸಂಘಟನೆಯ ಪದಾಧಿಕಾರಿಗಳು, ಹಿರಿಯರು, ಮಹಿಳೆಯರು ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!