ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ ಹಾಗೂ ಸೇವಾ ಸಂಕಲ್ಪ ಅಭಿಯಾನದ ಕಾರ್ಯಾಗಾರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಿರ್ಮಲಾ ಕೊಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳನ್ನು ಮಹಿಳೆಯರಿಗೆ ತಲುಪಿಸುವ ಜತೆಗೆ ಮಹಿಳಾ ಫಲಾನುಭವಿಗಳನ್ನು ಸಂಪರ್ಕಿಸಿ ಸಂಘಟನೆಯ ಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದು ಮಹಿಳಾ ಮೋರ್ಚಾ ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.
ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸಿಮ್ ಗೌಡ್ರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸೇವಾ ಸಂಕಲ್ಪ ಅಭಿಯಾನದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು. ಕೇಂದ್ರ ಸರ್ಕಾರದ ವತಿಯಿಂದ ನೀಡಲಾಗಿರುವ ಎಲ್ಲ ಸೇವಾ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಮಹಿಳಾ ಮೋರ್ಚಾ ಪದಾಧಿಕಾರಿಗಳು ಮುಂಚೂಣಿಯಲ್ಲಿ ನಿಲ್ಲಬೇಕು ಎಂದರು.
ಜಿಲ್ಲಾಧ್ಯಕ್ಷೆ ನಿರ್ಮಲಾ ಕೊಳ್ಳಿ ಮಾತನಾಡಿ, ಮಹಿಳಾ ಮೋರ್ಚಾ ಪದಾಧಿಕಾರಿಗಳು ಒಗ್ಗಟ್ಟಿನಿಂದ ಸೇವಾ ಕಾರ್ಯಗಳನ್ನು ಜಿಲ್ಲಾದ್ಯಂತ ಹಬ್ಬದ ರೀತಿಯಲ್ಲಿ ವಿಜೃಂಭಣೆಯಿಂದ ನಡೆಸೋಣ ಎಂದು ಕರೆ ನೀಡಿದರು.
ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕ ಅನಿಲ್ ಅಬ್ಬಿಗೇರಿ ಮಾತನಾಡಿ, ಸೆ.17ರಿಂದ ಅ.17ರವರೆಗೆ ನಡೆಯಲಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರ ಸೂಚಿಸಿರುವ ವಿವಿಧ ಸೇವಾ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಕವಿತಾ ಉಳ್ಳಾಗಡ್ಡಿ ರಾಜ್ಯದಿಂದ ಬಂದಿರುವ ಆದೇಶಗಳ ಕುರಿತು ವಿವರಿಸಿದರು. ಸಾಮಾಜಿಕ ಜಾಲತಾಣಗಳ ಬಳಕೆ ಹಾಗೂ ಅಭಿಯಾನದ ಪ್ರಚಾರದ ಕುರಿತು ಪ್ರೀತಿ ಶಿವಪ್ಪನಮಠ ಮಾಹಿತಿ ಹಂಚಿಕೊಂಡರು.
ವಿಜಯಲಕ್ಷ್ಮೀ ಮಾನ್ವಿ ಸ್ವಾಗತಿಸಿದರು. ಕಸ್ತೂರಿ ಕಮ್ಮಾರ ಪ್ರಾರ್ಥನೆ ನಡೆಸಿಕೊಟ್ಟರು. ಅಶ್ವಿನಿ ಅಂಕಲಕೋಟೆ ನಿರೂಪಿಸಿದರು. ಜ್ಯೋತಿ ಹಾನಗಲ ವಂದಿಸಿದರು.
ಅರುಣ ಪಾಟೀಲ, ಪಾರ್ವತಿ ಪತ್ತಾರ, ಪೂರ್ಣಿಮಾ ಆಟದ, ಶಾರದಾ ಜವಳಿ, ಸುಜಾತಾ ಕಾಡಪ್ಪನವರ್, ನಿರ್ಮಲ ಪಾಟೀಲ, ಅನುಸೂಯಾ ಸೋಮಗೇರಿ, ಜಯಶ್ರೀ ಉಗಲಾಟದ, ವಂದನ ವೇರನೆಕರ್, ಅಶ್ವಿನಿ ಜಗತಾಪ್, ಶಾರದಾ ಸಜ್ಜನರ, ಪಾರ್ವತಿ ಪಟ್ಟಣಶೆಟ್ಟಿ, ಪದ್ಮಿನಿ ಮುತ್ತಲದಿನ್ನಿ, ಕವಿತಾ ಬಂಗಾರಿ, ಮೇಘನಾ ಕೊಟ್ಟೂರ, ಸ್ವಾತಿ ಅಕ್ಕಿ, ರೇಖಾ ಗವಳಿ, ಪುಷ್ಪ ಪೂಜಾರ್, ಶ್ರೀದೇವಿ ಲಕ್ಷ್ಮಾಪುರ, ನೇತ್ರಾ ಜೋಗಿನ್, ಕೌಶಲ್ಯ ಬದಿ, ಸುನೀತಾ ಹಳ್ಳಿ ಸೇರಿದಂತೆ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಮಹಿಳಾ ಫಲಾನುಭವಿಗಳನ್ನು ತಲುಪಿ, ಕೇಂದ್ರದ ಯೋಜನೆಗಳ ಪ್ರಯೋಜನವನ್ನು ಅವರಿಗೆ ದೊರಕಿಸುವ ಜತೆಗೆ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು.
— ರಾಜು ಕುರಡಗಿ, ಬಿಜೆಪಿ ಜಿಲ್ಲಾಧ್ಯಕ್ಷ



