Homecinema‘ಅಮರನ್’ ಸಿನಿಮಾ ಪ್ರದರ್ಶನವಾಗುತ್ತಿದ್ದ ಚಿತ್ರಮಂದಿರದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ದುಷ್ಕರ್ಮಿಗಳು

‘ಅಮರನ್’ ಸಿನಿಮಾ ಪ್ರದರ್ಶನವಾಗುತ್ತಿದ್ದ ಚಿತ್ರಮಂದಿರದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ದುಷ್ಕರ್ಮಿಗಳು

For Dai;y Updates Join Our whatsapp Group

Spread the love

ಶಿವಕಾರ್ತಿಕೇಯನ್ ನಟನೆಯ ಅಮರನ್ ಸಿನಿಮಾ ಬಿಡುಗಡೆ ಆದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ವಿವಾದ ಹುಟ್ಟುಹಾಕುತ್ತಿದೆ. ಈ ಹಿಂದೆ ‘ಅಮರನ್’ ಜಾತಿಯ ಕಾರಣಕ್ಕೆ ಕೆಲವು ವಿವಾದಾದ್ಮಕ ಹೇಳಿಕೆಗಳು ಕೇಳಿಬಂದಿತ್ತು. ಇತ್ತೀಚೆಗೆ ಸಂಘಟನೆಯೊಂದು ಧರ್ಮದ ಕಾರಣಕ್ಕೆ ಸಿನಿಮಾದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿತು. ಇದೀಗ ‘ಅಮರನ್’ ಸಿನಿಮಾ ಪ್ರದರ್ಶನ ಆಗುತ್ತಿದ್ದ ಚಿತ್ರಮಂದಿರದ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ.

ತಮಿಳುನಾಡಿನ ತಿರುನಾಲ್ವೇಲಿಯ ಅಲಂಗಾರ್ ಚಿತ್ರಮಂದಿರದಲ್ಲಿ ‘ಅಮರನ್’ ಸಿನಿಮಾ ಕಳೆದ ಎರಡು ವಾರಗಳಿಂದಲೂ ಪ್ರದರ್ಶನಗೊಳ್ಳುತ್ತಿತ್ತು. ಆದರೆ ಶನಿವಾರ ಬೆಳ್ಳಂಬೆಳಿಗ್ಗೆ ಬೈಕ್​ನಲ್ಲಿ ಬಂದ ಇಬ್ಬರು ಮೂರು ಪೆಟ್ರೋಲ್ ಬಾಂಬ್​ಗಳನ್ನು ಚಿತ್ರಮಂದಿರದ ಮೇಲೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾರೆ. ಬೈಕ್​ನಲ್ಲಿ ಬಂದವರು ಪೆಟ್ರೋಲ್ ಬಾಂಬ್ ಎಸೆಯುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

‘ಅಮರನ್’ ಸಿನಿಮಾದ ನಾಯಕ ಪಾತ್ರ ಮೇಜರ್ ಮುಕುಂದನ್ ಅವರ ಜಾತಿಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗಿದೆ ಎಂದು ಒಂದು ಸಮುದಾಯದ ಗುಂಪಿನವರು ಮೊದಲಿಗೆ ಆಕ್ಷೇಪ ಎತ್ತಿದ್ದರು. ಇದಕ್ಕೆ ಸ್ಪಷ್ಟನೆ ನೀಡಿದ್ದ ನಿರ್ದೇಶಕ ರಾಜಕುಮಾರ್ ಪೆರಿಸ್ವಾಮಿ, ಕುಟುಂಬದ ಅಭಿಲಾಷೆಯ ಮೇರೆಗೆ ನಾವು ಜಾತಿಯನ್ನು ತೋರಿಸಿರಲಿಲ್ಲ ಎಂದಿದ್ದರು.

ಇತ್ತೀಚೆಗೆ ಎಸ್​ಡಿಪಿಐ ಸಂಘಟನೆ ಸಹ ‘ಅಮರನ್’ ಸಿನಿಮಾಕ್ಕೆ ವಿರೋಧ ವ್ಯಕ್ತಪಡಿಸಿದ್ದು, ‘ಅಮರನ್’ ಸಿನಿಮಾದಲ್ಲಿ ಕಾಶ್ಮೀರದಲ್ಲಿ ಇರುವ ಮುಸ್ಲೀಮರೆಲ್ಲ ಉಗ್ರವಾದಿಗಳೇ ಎಂಬರ್ಥ ಬರುವಂತೆ ತೋರಿಸಲಾಗಿದೆ ಇದು ಸರಿಯಲ್ಲ ಎಂದಿದ್ದರು. ಕೆಲವೆಡೆ ಪ್ರತಿಭಟನೆಯೂ ನಡೆದಿದ್ದವು. ಇದೆಲ್ಲದರ ಮಧ್ಯೆ ಈಗ ಚಿತ್ರಮಂದಿರದ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದ್ದು, ಈ ಕೃತ್ಯವನ್ನು ಯಾರು? ಯಾವ ಕಾರಣಕ್ಕೆ ಮಾಡಿದ್ದಾರೆ ಎಂದು ತಿಳಿಯಬೇಕಿದೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ‘ಅಮರನ್’ ಸಿನಿಮಾ ವಿರೋಧಿಸಿ ಈ ಕೃತ್ಯ ಎಸೆಗಲಾಗಿದೆ ಎಂದು ಖಾತ್ರಿಯಾಗಿ ಈಗಲೇ ಹೇಳಲಾಗದು ಎಂದಿರುವ ಪೊಲೀಸರು, ಚಿತ್ರಮಂದಿರ ಸ್ಥಳದ ವಿವಾದ ಕೆಲ ವರ್ಷಗಳಿಂದಲೂ ಚಾಲ್ತಿಯಲ್ಲಿದ್ದು, ಪೆಟ್ರೋಲ್ ಬಾಂಬ್ ದಾಳಿಗೆ ಬೇರೆ ಕಾರಣವೂ ಇರಬಹುದು ಎಂದಿದ್ದಾರೆ.

‘ಅಮರನ್’ ಸಿನಿಮಾ ನಿಜ ಘಟನೆ ಆಧರಿಸಿದ ಸಿನಿಮಾ ಆಗಿದೆ. ಮೇಜರ್ ಮುಕುಂದನ್ ಅವರ ಜೀವನ ಮತ್ತು ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದಲ್ಲಿ ಮುಕುಂದನ್ ಪಾತ್ರದಲ್ಲಿ ಶಿವಕಾರ್ತಿಕೇಯನ್ ನಟಿಸಿದ್ದು, ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಅಕ್ಟೋಬರ್ 31 ರಂದು ಬಿಡುಗಡೆ ಆಗಿರುವ ಸಿನಿಮಾವನ್ನು ಕಮಲ್ ಹಾಸನ್ ನಿರ್ಮಾಣ ಮಾಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!