ವಿಜಯಸಾಕ್ಷಿ ಸುದ್ದಿ, ಗದಗ: ಗಾನಲಹರಿ ಸಾಂಸ್ಕೃತಿಕ ಕಲಾ ಸಂಸ್ಥೆ, ಹಾವೇರಿ ಹಾಗೂ ಅಜೆಯ ಮ್ಯೂಜಿಕಲ್ ಅಕಾಡೆಮಿ, ಕೊಪ್ಪಳ ಇವರ ಸಹಯೋಗದಲ್ಲಿ ಆಗಸ್ಟ್ 8ರಂದು ಸಂಜೆ ನಗರದ ಭೀಮಸೇನ ಜೋಷಿ ರಂಗಮಂದಿರದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ಶ್ರೀನಾಥ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷೆ ಶೀಲಾ ಪಾಟೀಲ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಸಾನ್ನಿಧ್ಯವನ್ನು ಪ.ಪೂ. ಡಾ. ಕಲ್ಲಯ್ಯಜ್ಜನವರು ಹಾಗೂ ಪ.ಪೂ. ಶಿವಶಾಂತವೀರ ಶರಣರು ವಹಿಸಲಿದ್ದು, ಫೀರಸಾಬ್ ಕೌತಾಳ್ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೀಲಾ ವೀರನಗೌಡ ಪಾಟೀಲ ವಹಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ. ಎಚ್.ಕೆ. ಪಾಟೀಲ, ಜಿ.ಎಸ್. ಪಾಟೀಲ, ಸಿ.ಸಿ. ಪಾಟೀಲ, ಮುಖಂಡರಾದ ಸಚಿನ್ ಪಾಟೀಲ, ರಾಜಶೇಖರ ಕಲ್ಲೂರ, ಡಾ. ಬಸವರಾಜ ಬಳ್ಳಾರಿ, ಗವಿಸಿದ್ದಪ್ಪ ಪಲ್ಲೇದ, ಡಾ. ಶ್ರೀಧರ ಕುರಡಗಿ, ಸಿದ್ದರಾಮೇಶ್ವರ ಗಡೇದ, ವಿಜಯಕುಮಾರ ಗಡ್ಡಿ, ಇಮಾಮ್ ಮೊರಬದ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಅಮರ ಜವಳಿ ಹಾಗೂ ಶಶಾಂಕ್ ಗಜಾಕೋಶ ಉಪಸ್ಥಿತರಿದ್ದರು.



