ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಸಹಪೋಷಕ ಸದಸ್ಯರಾದ ಕೆ. ಶ್ರೀಕಾಂತ ಪಾಟೀಲ ಅವರನ್ನು ಮಹಾಸಭೆಯ ವತಿಯಿಂದ ಸನ್ಮಾನಿಸಲಾಯಿತು.
ಶ್ರೀಕಾಂತ ಪಾಟೀಲ ಅವರು ಮಹಾಸಭೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಕಾರ್ಯದರ್ಶಿಗಳಾದ ಎಚ್.ಎಂ. ರೇಣುಕಪ್ರಸನ್ನ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಹೈಕೋರ್ಟ್ ವಕೀಲರ ಸಂಘದ ಉಪಾಧ್ಯಕ್ಷರಾದ ಚಂದ್ರಕಾಂತ್ ಪಾಟೀಲ್, ಮಹಾಸಭೆಯ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾದ ಶರಣ ವೆಂಕಟ ರೆಡ್ಡಿ ಪಾಟೀಲ ಹಾಗೂ ಟಿ. ನರಸೀಪುರ ತಾಲೂಕು ಘಟಕದ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.



