HomeGadag Newsಆರ್‌ಎಸ್‌ಎಸ್ ಪಥಸಂಚಲನದಲ್ಲಿ ಪಾಲ್ಗೊಳ್ಳಿ

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಪಾಲ್ಗೊಳ್ಳಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ಧಿಯ ನಿಮಿತ್ತ ಅ.12ರಂದು ಮಧ್ಯಾಹ್ನ 2.45 ಗಂಟೆಗೆ ನಗರದ ವಿರೇಶ್ವರ ಲೈಬ್ರರಿ ಹತ್ತಿರದಿಂದ ಗಣವೇಷಧಾರಿ ಸ್ವಯಂಸೇವಕರ ಭವ್ಯ ಪಥ ಸಂಚಲನ ಕಾರ್ಯಕ್ರಮ ಜರುಗುವುದು. ಈ ಪಥಸಂಚಲನ ಗದಗ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಸಾಯಂಕಾಲ 5 ಗಂಟೆಗೆ ನಗರದ ಗದಗ-ಬೆಟಗೇರಿ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ಸಮಾರಂಭ ಜರುಗುವುದು.

ಈ ಪಥಸಂಚಲನ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯ ಸ್ವಯಂಸೇವಕರು, ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಗದಗ-ಬೆಟಗೇರಿ ನಗರಸಭೆಯ ಸದಸ್ಯ ವಿನಾಯಕ ಮಾನ್ವಿ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img