ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವ, ಸಂಡೂರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಗದಗ ಜಿಲ್ಲಾ ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಉಮರ ಫಾರೂಕ ಹುಬ್ಬಳ್ಳಿ ವಿಜಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ, ರಾಜ್ಯದ ಜನತೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಒಲವನ್ನು ತೋರಿಸಿ, ವಿರೋಧ ಪಕ್ಷಗಳಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು.
ವಿಜಯೋತ್ಸವದಲ್ಲಿ ಗದಗ ಶಹರ ಘಟಕದ ಉಪಾಧ್ಯಕ್ಷರು, ಗದಗ-ಬೆಟಗೇರಿ ನಗರಸಭೆ ನಾಮನಿರ್ದೇಶಿತ ಸದಸ್ಯ ಮಹಮ್ಮದ ಎನ್.ಶಾಲಗಾರ, ಎಂ.ಬಿ. ನದಾಫ್ ವಕೀಲರು, ಸಮಾಜ ಸೇವಕರಾದ ಅನ್ವರ ಶಿರಹಟ್ಟಿ, ವೀರಯ್ಯ ಬರದೂರಮಠ, ಹಾಜೀ ಜೀವನಸಾಬ ಮಂಗಳೂರು, ಇಮಾಮಸಾಬ ಜಾಫರ ಢಾಲಾಯತ, ಶಂಕರಗೌಡ್ರು, ನಾಗರಾಜ ಖೋಡೆ, ಶಿವು ಮಧುರಕರ, ಇಲಿಯಾಸ ಹುಬ್ಬಳ್ಳಿ, ಆಸಿಫ್ ಹುಬ್ಬಳ್ಳಿ ಮುಂತಾದವರು ಭಾಗವಹಿಸಿದ್ದರು.



