ಕೊಪ್ಪಳ: ನಾಲ್ಕೈದು ಜಿಲ್ಲೆಗಳ ಕೃಷಿ ಹಾಗೂ ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದು ಆತಂಕ ಸೃಷ್ಟಿಸಿದೆ.
ಜಲಾಶಯದ ಅಧಿಕಾರಿಗಳು ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಲುವೆಗೆ ನೀರು ಬಿಡಲಾಗಿತ್ತು. ನಾಲ್ಕು ಜಿಲ್ಲೆಗಳಿಗೆ ನೀರು ಪೂರೈಸುವ ಈ ಕಾಲುವೆ ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ಒಡೆದ ಪರಿಣಾಮ, ನೀರು ಪಕ್ಕದ ಜಮೀನುಗಳು ಹಾಗೂ ರೆಸಾರ್ಟ್ ಪ್ರದೇಶಗಳಿಗೆ ನುಗ್ಗಿ ಹಾನಿ ಉಂಟುಮಾಡಿದೆ.
ಘಟನೆ ತಿಳಿದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತುರ್ತು ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ ಕಾಲುವೆ ಒಡೆದ ಪರಿಣಾಮ ಸ್ಥಳೀಯರ ಬಲೆಗೆ ಬೃಹತ್ ಮೀನುಗಳು ಸಿಕ್ಕಿವೆ. ಅದರಲ್ಲಿ ವಿಶೇಷವಾಗಿ ಸುಮಾರು 15ರಿಂದ 20 ಕೆಜಿ ತೂಕದ ಮೀನು ಸಿಕ್ಕಿದ್ದು, ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ, ಕಾಲುವೆ ಒಡೆತದಿಂದ ಒಂದು ಕಡೆ ಹಾನಿ ಉಂಟಾದರೆ, ಇನ್ನೊಂದು ಕಡೆ ಅಪರೂಪದ ಮೀನು ಸಿಕ್ಕಿದ್ದು ಗ್ರಾಮಸ್ಥರ ಗಮನ ಸೆಳೆದಿದೆ.

